Advertisement
ಸುದ್ದಿಗಳು

ಮಹಿಳಾ ಕ್ರಿಕೆಟ್- ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾಕ್ಕೆ ಎಂಟು ವಿಕೆಟ್​ಗಳ ಗೆಲುವು

Share

ಮುಂಬೈ: ವಡೋದರಾದಲ್ಲಿ ನಡೆದ ಮಹಿಳಾ ಏಕದಿನ ಕ್ರಿಕೆಟ್ ನಲ್ಲಿ ಭಾರತದ ಮಹಿಳಾ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಎಂಟು ವಿಕೆಟ್ ಗೆಲುವು ಸಾಧಿಸಿದೆ. ಮೊದಲು ಬ್ಯಾಟ್​ ಮಾಡಿದ ದಕ್ಷಿಣ ಆಫ್ರಿಕಾ 45.4 ಓವರ್ ನಲ್ಲಿ 164 ರನ್​ಗಳ ಆಲ್ ಔಟ್ ಆಯಿತು. ನಂತರ ಬ್ಯಾಟ್​ ಮಾಡಿದ ಭಾರತ 41.4 ಓವರ್ ನಲ್ಲಿ 2 ವಿಕೆಟ್​ಗಳ ನಷ್ಟಕ್ಕೆ 165 ರನ್​ ಗಳಿಸುವ ಮೂಲಕ ಗೆಲುವಿನ ನಗು ಬೀರಿತು.

ಹೊಸ ದಾಖಲೆ ನಿರ್ಮಿಸಿದ ಕ್ಯಾಪ್ಟನ್​ ಮಿಥಾಲಿ ರಾಜ್​

ಭಾರತದ ಮಹಿಳಾ ಕ್ರಿಕೆಟ್​ ತಂಡದ ಟೆಸ್ಟ್​ ಹಾಗೂ ಏಕದಿನ ಪಂದ್ಯಾವಳಿಯ ನಾಯಕಿ ಮಿಥಾಲಿ ರಾಜ್​ ಹೊಸ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 20ಕ್ಕಿಂತಲೂ ಹೆಚ್ಚು ವರ್ಷ ನೆಲೆನಿಂತ ಮೊದಲ ಮಹಿಳಾ ಕ್ರಿಕೆಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇಂದು ವಡೋದರಾದ ರಿಲಯನ್ಸ್​ ಸ್ಟೇಡಿಯಂನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಏಕದಿನ ಪಂದ್ಯಾವಳಿಯಲ್ಲಿ ಆಡುವ ಮೂಲಕ ಈ ಸಾಧನೆಯನ್ನು ತಮ್ಮ ಮುಡಿಗೇರಿಸಿಕೊಂಡರು. ದಕ್ಷಿಣ ಆಫ್ರಿಯಾ ವಿರುದ್ಧ 11* ಗಳಿಸಿದರು. ಈ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಎಂಟು ವಿಕೆಟ್​ಗಳ ಗೆಲುವು ಸಾಧಿಸಿದೆ.

ಮಿಥಾಲಿ ರಾಜ್​ ಅವರು 1999ರ ಜೂನ್​ 26ರಂದು ಐರ್ಲೆಂಡ್​ ವಿರುದ್ಧ ತಮ್ಮ ಮೊದಲ ಏಕದಿನ ಪಂದ್ಯ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದರು. ಅವರೀಗ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಕಾಲಿಟ್ಟು 20 ವರ್ಷದ ಮೇಲೆ 105 ದಿನಗಳಾಗಿವೆ. ಏಕದಿನ ಪಂದ್ಯಾವಳಿಗಳನ್ನು 20 ವರ್ಷಗಳಿಂದ ಆಡುತ್ತಿರುವ ಮೊದಲ ಮಹಿಳಾ ಕ್ರಿಕೆಟರ್​ ಎಂಬ ಹೆಗ್ಗಳಿಕೆಯೂ ಮಿಥಾಲಿಯವರದ್ದಾಗಿದೆ.
ಮಹಿಳಾ ಕ್ರಿಕೆಟ್​ನಲ್ಲಿ ಅತಿಹೆಚ್ಚು ಏಕದಿನ ಪಂದ್ಯಗಳನ್ನು ಆಡುವ ಮೂಲಕ ಮಿಥಾಲಿ ದಾಖಲೆ ನಿರ್ಮಿಸಿದ್ದಾರೆ. ಈಗಿನವರೆಗೆ 204 ಒನ್​ ಡೇ ಮ್ಯಾಚ್​ಗಳನ್ನು ಆಡಿದ್ದಾರೆ. ಈವರು ಮೊದಲ ಸ್ಥಾನದಲ್ಲಿದ್ದು ಎರಡನೇ ಸ್ಥಾನದಲ್ಲಿ ಇಂಗ್ಲೆಂಡ್​ನ ಎಡ್ವರ್ಸ್​ (191 ಪಂದ್ಯ), ಹಾಗೂ ಮೂರನೇ ಸ್ಥಾನದಲ್ಲಿ ಭಾರತದ ಮಾಜಿ ಕ್ಯಾಪ್ಟನ್​ ಆಗಿದ್ದ ಜೂಲನ್​ ಗೋಸ್ವಾಮಿ (178) ಇದ್ದಾರೆ.

ಮಿಥಾಲಿ ರಾಜ್​ ಅವರು 10 ಟೆಸ್ಟ್​ ಪಂದ್ಯಗಳನ್ನು, 89 ಟಿ-20 ಪಂದ್ಯಾವಳಿಗಳನ್ನೂ ಆಡಿದ್ದಾರೆ. ಕಳೆದ ತಿಂಗಳಷ್ಟೇ ಟಿ-20 ಕ್ರಿಕೆಟ್​ನಿಂದ ನಿವೃತ್ತಿ ಪಡೆದಿದ್ದು, ಹರ್ಮನ್ ಪ್ರೀತ್ ಕೌರ್ ನಾಯಕಿಯಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

6 hours ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

6 hours ago

ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…

7 hours ago

ಡ್ರ್ಯಾಗನ್‌ ಫ್ರೂಟ್‌ ಬೆಳೆದರೆ ಸಾಕೇ..? ದಕ್ಷಿಣ ಆಫ್ರಿಕಾದಲ್ಲಿ ರೈತರಿಗೆ ಎದುರಾದ ಸವಾಲುಗಳು ಭಾರತಕ್ಕೂ ಪಾಠ

ಡ್ರ್ಯಾಗನ್‌ ಫ್ರೂಟ್‌ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…

7 hours ago

ಕೆಲವು ಸಂಬಂಧಗಳನ್ನು ಉಳಿಸುವುದು ಮೌನವೇ..

ಪ್ರತಿಯೊಂದು ಮಾತಿಗೂ ತಕ್ಷಣ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಕೆಲವೊಮ್ಮೆ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಮೌನವೇ ಉತ್ತಮ…

7 hours ago

ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!

ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…

16 hours ago