Advertisement
ಸುದ್ದಿಗಳು

ಮಹಿಳಾ ಕ್ರಿಕೆಟ್- ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾಕ್ಕೆ ಎಂಟು ವಿಕೆಟ್​ಗಳ ಗೆಲುವು

Share

ಮುಂಬೈ: ವಡೋದರಾದಲ್ಲಿ ನಡೆದ ಮಹಿಳಾ ಏಕದಿನ ಕ್ರಿಕೆಟ್ ನಲ್ಲಿ ಭಾರತದ ಮಹಿಳಾ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಎಂಟು ವಿಕೆಟ್ ಗೆಲುವು ಸಾಧಿಸಿದೆ. ಮೊದಲು ಬ್ಯಾಟ್​ ಮಾಡಿದ ದಕ್ಷಿಣ ಆಫ್ರಿಕಾ 45.4 ಓವರ್ ನಲ್ಲಿ 164 ರನ್​ಗಳ ಆಲ್ ಔಟ್ ಆಯಿತು. ನಂತರ ಬ್ಯಾಟ್​ ಮಾಡಿದ ಭಾರತ 41.4 ಓವರ್ ನಲ್ಲಿ 2 ವಿಕೆಟ್​ಗಳ ನಷ್ಟಕ್ಕೆ 165 ರನ್​ ಗಳಿಸುವ ಮೂಲಕ ಗೆಲುವಿನ ನಗು ಬೀರಿತು.

ಹೊಸ ದಾಖಲೆ ನಿರ್ಮಿಸಿದ ಕ್ಯಾಪ್ಟನ್​ ಮಿಥಾಲಿ ರಾಜ್​

ಭಾರತದ ಮಹಿಳಾ ಕ್ರಿಕೆಟ್​ ತಂಡದ ಟೆಸ್ಟ್​ ಹಾಗೂ ಏಕದಿನ ಪಂದ್ಯಾವಳಿಯ ನಾಯಕಿ ಮಿಥಾಲಿ ರಾಜ್​ ಹೊಸ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 20ಕ್ಕಿಂತಲೂ ಹೆಚ್ಚು ವರ್ಷ ನೆಲೆನಿಂತ ಮೊದಲ ಮಹಿಳಾ ಕ್ರಿಕೆಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇಂದು ವಡೋದರಾದ ರಿಲಯನ್ಸ್​ ಸ್ಟೇಡಿಯಂನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಏಕದಿನ ಪಂದ್ಯಾವಳಿಯಲ್ಲಿ ಆಡುವ ಮೂಲಕ ಈ ಸಾಧನೆಯನ್ನು ತಮ್ಮ ಮುಡಿಗೇರಿಸಿಕೊಂಡರು. ದಕ್ಷಿಣ ಆಫ್ರಿಯಾ ವಿರುದ್ಧ 11* ಗಳಿಸಿದರು. ಈ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಎಂಟು ವಿಕೆಟ್​ಗಳ ಗೆಲುವು ಸಾಧಿಸಿದೆ.

ಮಿಥಾಲಿ ರಾಜ್​ ಅವರು 1999ರ ಜೂನ್​ 26ರಂದು ಐರ್ಲೆಂಡ್​ ವಿರುದ್ಧ ತಮ್ಮ ಮೊದಲ ಏಕದಿನ ಪಂದ್ಯ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದರು. ಅವರೀಗ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಕಾಲಿಟ್ಟು 20 ವರ್ಷದ ಮೇಲೆ 105 ದಿನಗಳಾಗಿವೆ. ಏಕದಿನ ಪಂದ್ಯಾವಳಿಗಳನ್ನು 20 ವರ್ಷಗಳಿಂದ ಆಡುತ್ತಿರುವ ಮೊದಲ ಮಹಿಳಾ ಕ್ರಿಕೆಟರ್​ ಎಂಬ ಹೆಗ್ಗಳಿಕೆಯೂ ಮಿಥಾಲಿಯವರದ್ದಾಗಿದೆ.
ಮಹಿಳಾ ಕ್ರಿಕೆಟ್​ನಲ್ಲಿ ಅತಿಹೆಚ್ಚು ಏಕದಿನ ಪಂದ್ಯಗಳನ್ನು ಆಡುವ ಮೂಲಕ ಮಿಥಾಲಿ ದಾಖಲೆ ನಿರ್ಮಿಸಿದ್ದಾರೆ. ಈಗಿನವರೆಗೆ 204 ಒನ್​ ಡೇ ಮ್ಯಾಚ್​ಗಳನ್ನು ಆಡಿದ್ದಾರೆ. ಈವರು ಮೊದಲ ಸ್ಥಾನದಲ್ಲಿದ್ದು ಎರಡನೇ ಸ್ಥಾನದಲ್ಲಿ ಇಂಗ್ಲೆಂಡ್​ನ ಎಡ್ವರ್ಸ್​ (191 ಪಂದ್ಯ), ಹಾಗೂ ಮೂರನೇ ಸ್ಥಾನದಲ್ಲಿ ಭಾರತದ ಮಾಜಿ ಕ್ಯಾಪ್ಟನ್​ ಆಗಿದ್ದ ಜೂಲನ್​ ಗೋಸ್ವಾಮಿ (178) ಇದ್ದಾರೆ.

ಮಿಥಾಲಿ ರಾಜ್​ ಅವರು 10 ಟೆಸ್ಟ್​ ಪಂದ್ಯಗಳನ್ನು, 89 ಟಿ-20 ಪಂದ್ಯಾವಳಿಗಳನ್ನೂ ಆಡಿದ್ದಾರೆ. ಕಳೆದ ತಿಂಗಳಷ್ಟೇ ಟಿ-20 ಕ್ರಿಕೆಟ್​ನಿಂದ ನಿವೃತ್ತಿ ಪಡೆದಿದ್ದು, ಹರ್ಮನ್ ಪ್ರೀತ್ ಕೌರ್ ನಾಯಕಿಯಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

9 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

19 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

20 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

20 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago