Advertisement
ಕಾರ್ಯಕ್ರಮಗಳು

ಮಾಂಬಾಡಿ ಮನೆತನದಲ್ಲಿ ಯಕ್ಷಗಾನದ ಶೈಕ್ಷಣಿಕ ಶಿಸ್ತಿನ ಬದ್ಧತೆಯಿದೆ- ಪದ್ಯಾಣ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರೊ.ಎಂ.ಎಲ್.ಸಾಮಗ

Share

ಪುತ್ತೂರು: ಕಲಾ ಬದುಕಿನ ಒಂದು ಕಾಲಘಟ್ಟದ ಬಳಿಕ ಪ್ರಾಪ್ತವಾಗುವ ಪ್ರಶಸ್ತಿಗಳು, ಸಮ್ಮಾನಗಳು, ಗೌರವಗಳು ಕಲಾವಿದನಿಗೆ ಸಂತೃಪ್ತ ಭಾವ ತರಲು ಸಹಕಾರಿ. ತನ್ನ ನಡುವೆ ಇರುವ ಸಾಧಕ ಕಲಾವಿದರನ್ನು ಹುಡುಕಿ ಗೌರವಿಸುವುದು ಕೂಡಾ ಸುಸಂಸ್ಕೃತ ಸಮಾಜದ ಜವಾಬ್ದಾರಿಯಾಗಿರುತ್ತದೆ. ಅದು ಕಲೆಗೆ ನೀಡುವ ಗೌರವ ಕೂಡಾ ಹೌದು.” ಎಂದು ಕರ್ನಾಟಕ ಬಯಲಾಟ ಅಕಾಡೆಮಿಯ ಮಾಜಿ ಅಧ್ಯಕ್ಷ, ವಿಶ್ರಾಂತ ಪ್ರಾಚಾರ್ಯ ಪ್ರೊ.ಎಂ.ಎಲ್.ಸಾಮಗ ಹೇಳಿದರು.

ಅವರು ಬಂಟ್ವಾಳ ತಾಲೂಕಿನ ಮಿತ್ತನಡ್ಕ ಸನಿಹದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಳದ ಸಭಾಭವನದಲ್ಲಿ ಜರುಗಿದ ‘ಪದ್ಯಾಣ ಪ್ರಶಸ್ತಿ ಪ್ರದಾನ’ ಸಮಾರಂಭದಲ್ಲಿ ಮಾತನಾಡುತ್ತಾ, “ಯಕ್ಷಗಾನಕ್ಕೆ ಪಠ್ಯವು ಸಿದ್ಧವಾಗಿದ್ದು ಅದಕ್ಕೊಂದು ಶೈಕ್ಷಣಿಕ ಆವರಣ, ಶಿಸ್ತಿನ ಪ್ರಮಾಣೀಕರಣವಾಗುತ್ತಿರುವುದು ಸಂತೋಷದ ವಿಚಾರ. ಇಂತಹ ಯಕ್ಷಗಾನದ ಶೈಕ್ಷಣಿಕ ಶಿಸ್ತನ್ನು ಹಾಗೂ ಬದ್ಧತೆಯನ್ನು ಮಾಂಬಾಡಿ ಮನೆತನದಲ್ಲಿ ಕಾಣಬಹುದು.” ಎಂದರು.

ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಡಾ.ಟಿ.ಶ್ಯಾಮ ಭಟ್ ಸಭಾಧ್ಯಕತೆಯನ್ನು ವಹಿಸಿದ್ದರು. ಯಕ್ಷಶಿಕ್ಷಣ ಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಹಾರ, ಶಾಲು, ಹಣ್ಣುಹಂಪಲು, ಸಂಮಾನ ಪತ್ರ, ಸ್ಮರಣಿಕೆ ಮತ್ತು ನಿಧಿಯೊಂದಿಗೆ ‘ಪದ್ಯಾಣ ಪ್ರಶಸ್ತಿ’ಯನ್ನು ಪ್ರದಾನಿಸಲಾಯಿತು. ವೇದಿಕೆಯಲ್ಲಿ ಮಾಂಬಾಡಿಯರ ಧರ್ಮಪತ್ನಿ ಲಕ್ಷ್ಮೀ ಅಮ್ಮ ಉಪಸ್ಥಿತರಿದ್ದರು. ಸಂಮಾನಿತರನ್ನು ಅರ್ಥದಾರಿ ವಿದ್ವಾನ್ ಹಿರಣ್ಯ ವೆಂಕಟೇಶ್ವರ ಭಟ್ಟರು ನುಡಿಹಾರಗಳೊಂದಿಗೆ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಪ್ರಶಸ್ತಿ ಪುರಸ್ಕೃತ ಮಾಂಬಾಡಿಯವರ ಕುರಿತು ಪತ್ರಕರ್ತ, ಅಂಕಣಗಾರ ನಾ. ಕಾರಂತ ಪೆರಾಜೆ ಸಂಪಾದಕತ್ವದ ಕಿರು ಪುಸ್ತಿಕೆಯನ್ನು ಟಿ.ಶ್ಯಾಮ ಭಟ್ಟರು ಬಿಡುಗಡೆಗೊಳಿಸಿದರು. ಪದ್ಯಾಣ ಶ್ರೀಕ್ಷೇತ್ರದ ಆಡಳಿತ ಮೊಕ್ತೇಸರ ಸೇರಾಜೆ ಸತ್ಯನಾರಾಯಣ ಭಟ್ಟರು ಶುಭಾಶಂಸನೆ ಮಾಡಿದರು. ಪದ್ಯಾಣ ಪ್ರಶಸ್ತಿ ಸಮಿತಿಯ ಕಾರ್ಯದರ್ಶಿ ಸ್ವಸ್ತಿಕ್ ಪದ್ಯಾಣ ಸ್ವಾಗತಿಸಿದರು. ಡಾ.ಸುಬ್ರಹ್ಮಣ್ಯ ಭಟ್ ಪದ್ಯಾಣ ವಂದಿಸಿದರು. ನಾ. ಕಾರಂತ ಪೆರಾಜೆ ನಿರ್ವಹಿಸಿದರು. ಸಮಿತಿಯ ಅಧ್ಯಕ್ಷರಾದ ಪದ್ಯಾಣ ಗೋಪಾಲಕೃಷ್ಣ ಭಟ್ಟರು ಅತಿಥಿಗಳಿಗೆ ಸ್ಮರಣಿಕೆ ನೀಡಿದರು. ಪದ್ಯಾಣ ಗಣಪತಿ ಭಟ್, ಪದ್ಯಾಣ ಶಂಕರನಾರಾಯಣ ಭಟ್, ಪದ್ಯಾಣ ಶಿವರಾಮ ಭಟ್ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದರು. ಈ ಸಂದರ್ಭದಲ್ಲಿ ಹನುಮಗಿರಿ ಮೇಳದವರಿಂದ ‘ಸತ್ಯಾಂತರಂಗ’ ಪ್ರದರ್ಶನ ಜರುಗಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

7 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

7 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

1 day ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago