Advertisement
ಕಾರ್ಯಕ್ರಮಗಳು

ಮಾಂಬಾಡಿ ಮನೆತನದಲ್ಲಿ ಯಕ್ಷಗಾನದ ಶೈಕ್ಷಣಿಕ ಶಿಸ್ತಿನ ಬದ್ಧತೆಯಿದೆ- ಪದ್ಯಾಣ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರೊ.ಎಂ.ಎಲ್.ಸಾಮಗ

Share

ಪುತ್ತೂರು: ಕಲಾ ಬದುಕಿನ ಒಂದು ಕಾಲಘಟ್ಟದ ಬಳಿಕ ಪ್ರಾಪ್ತವಾಗುವ ಪ್ರಶಸ್ತಿಗಳು, ಸಮ್ಮಾನಗಳು, ಗೌರವಗಳು ಕಲಾವಿದನಿಗೆ ಸಂತೃಪ್ತ ಭಾವ ತರಲು ಸಹಕಾರಿ. ತನ್ನ ನಡುವೆ ಇರುವ ಸಾಧಕ ಕಲಾವಿದರನ್ನು ಹುಡುಕಿ ಗೌರವಿಸುವುದು ಕೂಡಾ ಸುಸಂಸ್ಕೃತ ಸಮಾಜದ ಜವಾಬ್ದಾರಿಯಾಗಿರುತ್ತದೆ. ಅದು ಕಲೆಗೆ ನೀಡುವ ಗೌರವ ಕೂಡಾ ಹೌದು.” ಎಂದು ಕರ್ನಾಟಕ ಬಯಲಾಟ ಅಕಾಡೆಮಿಯ ಮಾಜಿ ಅಧ್ಯಕ್ಷ, ವಿಶ್ರಾಂತ ಪ್ರಾಚಾರ್ಯ ಪ್ರೊ.ಎಂ.ಎಲ್.ಸಾಮಗ ಹೇಳಿದರು.

ಅವರು ಬಂಟ್ವಾಳ ತಾಲೂಕಿನ ಮಿತ್ತನಡ್ಕ ಸನಿಹದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಳದ ಸಭಾಭವನದಲ್ಲಿ ಜರುಗಿದ ‘ಪದ್ಯಾಣ ಪ್ರಶಸ್ತಿ ಪ್ರದಾನ’ ಸಮಾರಂಭದಲ್ಲಿ ಮಾತನಾಡುತ್ತಾ, “ಯಕ್ಷಗಾನಕ್ಕೆ ಪಠ್ಯವು ಸಿದ್ಧವಾಗಿದ್ದು ಅದಕ್ಕೊಂದು ಶೈಕ್ಷಣಿಕ ಆವರಣ, ಶಿಸ್ತಿನ ಪ್ರಮಾಣೀಕರಣವಾಗುತ್ತಿರುವುದು ಸಂತೋಷದ ವಿಚಾರ. ಇಂತಹ ಯಕ್ಷಗಾನದ ಶೈಕ್ಷಣಿಕ ಶಿಸ್ತನ್ನು ಹಾಗೂ ಬದ್ಧತೆಯನ್ನು ಮಾಂಬಾಡಿ ಮನೆತನದಲ್ಲಿ ಕಾಣಬಹುದು.” ಎಂದರು.

ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಡಾ.ಟಿ.ಶ್ಯಾಮ ಭಟ್ ಸಭಾಧ್ಯಕತೆಯನ್ನು ವಹಿಸಿದ್ದರು. ಯಕ್ಷಶಿಕ್ಷಣ ಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಹಾರ, ಶಾಲು, ಹಣ್ಣುಹಂಪಲು, ಸಂಮಾನ ಪತ್ರ, ಸ್ಮರಣಿಕೆ ಮತ್ತು ನಿಧಿಯೊಂದಿಗೆ ‘ಪದ್ಯಾಣ ಪ್ರಶಸ್ತಿ’ಯನ್ನು ಪ್ರದಾನಿಸಲಾಯಿತು. ವೇದಿಕೆಯಲ್ಲಿ ಮಾಂಬಾಡಿಯರ ಧರ್ಮಪತ್ನಿ ಲಕ್ಷ್ಮೀ ಅಮ್ಮ ಉಪಸ್ಥಿತರಿದ್ದರು. ಸಂಮಾನಿತರನ್ನು ಅರ್ಥದಾರಿ ವಿದ್ವಾನ್ ಹಿರಣ್ಯ ವೆಂಕಟೇಶ್ವರ ಭಟ್ಟರು ನುಡಿಹಾರಗಳೊಂದಿಗೆ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಪ್ರಶಸ್ತಿ ಪುರಸ್ಕೃತ ಮಾಂಬಾಡಿಯವರ ಕುರಿತು ಪತ್ರಕರ್ತ, ಅಂಕಣಗಾರ ನಾ. ಕಾರಂತ ಪೆರಾಜೆ ಸಂಪಾದಕತ್ವದ ಕಿರು ಪುಸ್ತಿಕೆಯನ್ನು ಟಿ.ಶ್ಯಾಮ ಭಟ್ಟರು ಬಿಡುಗಡೆಗೊಳಿಸಿದರು. ಪದ್ಯಾಣ ಶ್ರೀಕ್ಷೇತ್ರದ ಆಡಳಿತ ಮೊಕ್ತೇಸರ ಸೇರಾಜೆ ಸತ್ಯನಾರಾಯಣ ಭಟ್ಟರು ಶುಭಾಶಂಸನೆ ಮಾಡಿದರು. ಪದ್ಯಾಣ ಪ್ರಶಸ್ತಿ ಸಮಿತಿಯ ಕಾರ್ಯದರ್ಶಿ ಸ್ವಸ್ತಿಕ್ ಪದ್ಯಾಣ ಸ್ವಾಗತಿಸಿದರು. ಡಾ.ಸುಬ್ರಹ್ಮಣ್ಯ ಭಟ್ ಪದ್ಯಾಣ ವಂದಿಸಿದರು. ನಾ. ಕಾರಂತ ಪೆರಾಜೆ ನಿರ್ವಹಿಸಿದರು. ಸಮಿತಿಯ ಅಧ್ಯಕ್ಷರಾದ ಪದ್ಯಾಣ ಗೋಪಾಲಕೃಷ್ಣ ಭಟ್ಟರು ಅತಿಥಿಗಳಿಗೆ ಸ್ಮರಣಿಕೆ ನೀಡಿದರು. ಪದ್ಯಾಣ ಗಣಪತಿ ಭಟ್, ಪದ್ಯಾಣ ಶಂಕರನಾರಾಯಣ ಭಟ್, ಪದ್ಯಾಣ ಶಿವರಾಮ ಭಟ್ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದರು. ಈ ಸಂದರ್ಭದಲ್ಲಿ ಹನುಮಗಿರಿ ಮೇಳದವರಿಂದ ‘ಸತ್ಯಾಂತರಂಗ’ ಪ್ರದರ್ಶನ ಜರುಗಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

5 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

5 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

5 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

5 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

22 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago