ಮಂಗಳೂರು: ಬೆಂಗಳೂರಿನ ಶ್ರೀ ಅವನಿ ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಂನ ಶ್ರೀ ಶಾರದಾ ಪೀಠ ವತಿಯಿಂದ ಅಕ್ಟೋಬರ್ 8ರಂದು ನಡೆಯುವ ಸಮಾರಂಭದಲ್ಲಿ ತೆಂಕುತಿಟ್ಟು ಯಕ್ಷಗಾನದ ಹಿರಿಯ ಕಲಾವಿದ, ಯಕ್ಷಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರನ್ನು ಆಸ್ಥಾನ ವಿದ್ವಾನ್ ಪ್ರಶಸ್ತಿ ನೀಡಿ ಸನ್ಮಾನಿಸಲಿದೆ.
ನಾನಾ ಕ್ಷೇತ್ರಗಳಲ್ಲಿ ದುಡಿದ ಒಟ್ಟ ಐವರು ಮಹನೀಯರಿಗೆ ಈ ಪ್ರಶಸ್ತಿ ದೊರಕಲಿದ್ದು, ತೆಂಕುತಿಟ್ಟು ಯಕ್ಷಗಾನ ಕ್ಷೇತ್ರದ ಕಲಾವಿದರೊಬ್ಬರಿಗೆ ಅವನಿ ಶೃಂಗೇರಿ ಪೀಠದಿಂದ ಇದೇ ಮೊದಲ ಬಾರಿಗೆ ಆಸ್ಥಾನ ವಿದ್ವಾನ್ ಬಿರುದು ನೀಡಲಾಗುತ್ತಿದೆ ಎಂದು ಮಠದ ಭಕ್ತವೃಂದದವರಾದ ಶರವೂರು ಸುಬ್ರಹ್ಮಣ್ಯ ರಾವ್ ತಿಳಿಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀಪುರಂನ ಪಶ್ಚಿಮ ಕಾರ್ಡ್ ರಸ್ತೆಯಲ್ಲಿ ಅವನಿ ಶ್ರೀ ಶಾರದಾಪೀಠಂ ಮಠವಿದ್ದು, ಇಲ್ಲಿ ಕಾರ್ಯಕ್ರಮ ನಡೆಯಲಿದೆ. ತೆಂಕುತಿಟ್ಟಿನಲ್ಲಿ ಸುಮಾರು 60 ವರ್ಷಗಳ ಅನುಭವ ಇರುವ 71ರ ಹರೆಯದ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರು ಹಿಂದೆ ಧರ್ಮಸ್ಥಳ, ಕದ್ರಿ, ಕಟೀಲು ಸಹಿತ ನಾನಾ ಮೇಳಗಳಲ್ಲಿ ಹಿಮ್ಮೇಳವಾದಕರಾಗಿ ದುಡಿದಿದ್ದಾರೆ. ಕಳೆದ 50 ವರ್ಷಗಳಿಂದ ಅವರು ಹಿಮ್ಮೇಳ ಶಿಕ್ಷಣ ನೀಡುತ್ತಿದ್ದು, ಸಾವಿರಾರು ಶಿಷ್ಯರನ್ನು ಹೊಂದಿದ್ದಾರೆ. ಈಗಾಗಲೇ ಸುಬ್ರಹ್ಮಣ್ಯ ಭಟ್ಟರಿಗೆ ಕಸಾಪ ರಾಜ್ಯ ಸಮ್ಮೇಳನದಲ್ಲಿ ಸನ್ಮಾನ, ಜಿಲ್ಲಾ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಸಹಿತ ಹಲವು ಕಡೆಗಳಲ್ಲಿ ಸನ್ಮಾನಗಳು, ಶಿಷ್ಯರಿಂದ ಅಭಿನಂದನಾ ಕಾರ್ಯಕ್ರಮಗಳು ನಡೆದಿವೆ. ಕಳೆದ ವರ್ಷ ಮಂಗಳೂರಿನಲ್ಲಿ ಅವರ ಶಿಷ್ಯರ ಸಮಾವೇಶ ನಡೆದಿತ್ತು. ತೆಂಕುತಿಟ್ಟಿನ ಪ್ರಸಕ್ತ ಹಿಮ್ಮೇಳ ಕಲಾವಿದರ ಪೈಕಿ ಬಹುತೇಕರು ಮಾಂಬಾಡಿ ಶಿಷ್ಯರಾಗಿದ್ದು, ದ.ಕ, ಕಾಸರಗೋಡು ಅಲ್ಲದೆ ಬೆಂಗಳೂರಿನಲ್ಲೂ ಶಿಷ್ಯರಿದ್ದಾರೆ.
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…