Advertisement
ಸುದ್ದಿಗಳು

ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಆಸ್ಥಾನ ವಿದ್ವಾನ್ ಗೌರವ

Share

ಮಂಗಳೂರು: ಬೆಂಗಳೂರಿನ ಶ್ರೀ ಅವನಿ ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಂನ ಶ್ರೀ ಶಾರದಾ ಪೀಠ ವತಿಯಿಂದ ಅಕ್ಟೋಬರ್ 8ರಂದು ನಡೆಯುವ ಸಮಾರಂಭದಲ್ಲಿ ತೆಂಕುತಿಟ್ಟು ಯಕ್ಷಗಾನದ ಹಿರಿಯ ಕಲಾವಿದ, ಯಕ್ಷಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರನ್ನು ಆಸ್ಥಾನ ವಿದ್ವಾನ್ ಪ್ರಶಸ್ತಿ ನೀಡಿ ಸನ್ಮಾನಿಸಲಿದೆ.

ನಾನಾ ಕ್ಷೇತ್ರಗಳಲ್ಲಿ ದುಡಿದ ಒಟ್ಟ ಐವರು ಮಹನೀಯರಿಗೆ ಈ ಪ್ರಶಸ್ತಿ ದೊರಕಲಿದ್ದು, ತೆಂಕುತಿಟ್ಟು ಯಕ್ಷಗಾನ ಕ್ಷೇತ್ರದ ಕಲಾವಿದರೊಬ್ಬರಿಗೆ ಅವನಿ ಶೃಂಗೇರಿ ಪೀಠದಿಂದ ಇದೇ ಮೊದಲ ಬಾರಿಗೆ ಆಸ್ಥಾನ ವಿದ್ವಾನ್ ಬಿರುದು ನೀಡಲಾಗುತ್ತಿದೆ ಎಂದು ಮಠದ ಭಕ್ತವೃಂದದವರಾದ ಶರವೂರು ಸುಬ್ರಹ್ಮಣ್ಯ ರಾವ್ ತಿಳಿಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀಪುರಂನ ಪಶ್ಚಿಮ ಕಾರ್ಡ್ ರಸ್ತೆಯಲ್ಲಿ ಅವನಿ ಶ್ರೀ ಶಾರದಾಪೀಠಂ ಮಠವಿದ್ದು, ಇಲ್ಲಿ ಕಾರ್ಯಕ್ರಮ ನಡೆಯಲಿದೆ. ತೆಂಕುತಿಟ್ಟಿನಲ್ಲಿ ಸುಮಾರು 60 ವರ್ಷಗಳ ಅನುಭವ ಇರುವ 71ರ ಹರೆಯದ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರು ಹಿಂದೆ ಧರ್ಮಸ್ಥಳ, ಕದ್ರಿ, ಕಟೀಲು ಸಹಿತ ನಾನಾ ಮೇಳಗಳಲ್ಲಿ ಹಿಮ್ಮೇಳವಾದಕರಾಗಿ ದುಡಿದಿದ್ದಾರೆ. ಕಳೆದ 50 ವರ್ಷಗಳಿಂದ ಅವರು ಹಿಮ್ಮೇಳ ಶಿಕ್ಷಣ ನೀಡುತ್ತಿದ್ದು, ಸಾವಿರಾರು ಶಿಷ್ಯರನ್ನು ಹೊಂದಿದ್ದಾರೆ. ಈಗಾಗಲೇ ಸುಬ್ರಹ್ಮಣ್ಯ ಭಟ್ಟರಿಗೆ ಕಸಾಪ ರಾಜ್ಯ ಸಮ್ಮೇಳನದಲ್ಲಿ ಸನ್ಮಾನ, ಜಿಲ್ಲಾ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಸಹಿತ ಹಲವು ಕಡೆಗಳಲ್ಲಿ ಸನ್ಮಾನಗಳು, ಶಿಷ್ಯರಿಂದ ಅಭಿನಂದನಾ ಕಾರ್ಯಕ್ರಮಗಳು ನಡೆದಿವೆ. ಕಳೆದ ವರ್ಷ ಮಂಗಳೂರಿನಲ್ಲಿ ಅವರ ಶಿಷ್ಯರ ಸಮಾವೇಶ ನಡೆದಿತ್ತು. ತೆಂಕುತಿಟ್ಟಿನ ಪ್ರಸಕ್ತ ಹಿಮ್ಮೇಳ ಕಲಾವಿದರ ಪೈಕಿ ಬಹುತೇಕರು ಮಾಂಬಾಡಿ ಶಿಷ್ಯರಾಗಿದ್ದು, ದ.ಕ, ಕಾಸರಗೋಡು ಅಲ್ಲದೆ ಬೆಂಗಳೂರಿನಲ್ಲೂ ಶಿಷ್ಯರಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

18 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

20 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

21 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

1 day ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

1 day ago