Advertisement
ಸುದ್ದಿಗಳು

ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಆಸ್ಥಾನ ವಿದ್ವಾನ್ ಗೌರವ

Share

ಮಂಗಳೂರು: ಬೆಂಗಳೂರಿನ ಶ್ರೀ ಅವನಿ ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಂನ ಶ್ರೀ ಶಾರದಾ ಪೀಠ ವತಿಯಿಂದ ಅಕ್ಟೋಬರ್ 8ರಂದು ನಡೆಯುವ ಸಮಾರಂಭದಲ್ಲಿ ತೆಂಕುತಿಟ್ಟು ಯಕ್ಷಗಾನದ ಹಿರಿಯ ಕಲಾವಿದ, ಯಕ್ಷಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರನ್ನು ಆಸ್ಥಾನ ವಿದ್ವಾನ್ ಪ್ರಶಸ್ತಿ ನೀಡಿ ಸನ್ಮಾನಿಸಲಿದೆ.

ನಾನಾ ಕ್ಷೇತ್ರಗಳಲ್ಲಿ ದುಡಿದ ಒಟ್ಟ ಐವರು ಮಹನೀಯರಿಗೆ ಈ ಪ್ರಶಸ್ತಿ ದೊರಕಲಿದ್ದು, ತೆಂಕುತಿಟ್ಟು ಯಕ್ಷಗಾನ ಕ್ಷೇತ್ರದ ಕಲಾವಿದರೊಬ್ಬರಿಗೆ ಅವನಿ ಶೃಂಗೇರಿ ಪೀಠದಿಂದ ಇದೇ ಮೊದಲ ಬಾರಿಗೆ ಆಸ್ಥಾನ ವಿದ್ವಾನ್ ಬಿರುದು ನೀಡಲಾಗುತ್ತಿದೆ ಎಂದು ಮಠದ ಭಕ್ತವೃಂದದವರಾದ ಶರವೂರು ಸುಬ್ರಹ್ಮಣ್ಯ ರಾವ್ ತಿಳಿಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀಪುರಂನ ಪಶ್ಚಿಮ ಕಾರ್ಡ್ ರಸ್ತೆಯಲ್ಲಿ ಅವನಿ ಶ್ರೀ ಶಾರದಾಪೀಠಂ ಮಠವಿದ್ದು, ಇಲ್ಲಿ ಕಾರ್ಯಕ್ರಮ ನಡೆಯಲಿದೆ. ತೆಂಕುತಿಟ್ಟಿನಲ್ಲಿ ಸುಮಾರು 60 ವರ್ಷಗಳ ಅನುಭವ ಇರುವ 71ರ ಹರೆಯದ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರು ಹಿಂದೆ ಧರ್ಮಸ್ಥಳ, ಕದ್ರಿ, ಕಟೀಲು ಸಹಿತ ನಾನಾ ಮೇಳಗಳಲ್ಲಿ ಹಿಮ್ಮೇಳವಾದಕರಾಗಿ ದುಡಿದಿದ್ದಾರೆ. ಕಳೆದ 50 ವರ್ಷಗಳಿಂದ ಅವರು ಹಿಮ್ಮೇಳ ಶಿಕ್ಷಣ ನೀಡುತ್ತಿದ್ದು, ಸಾವಿರಾರು ಶಿಷ್ಯರನ್ನು ಹೊಂದಿದ್ದಾರೆ. ಈಗಾಗಲೇ ಸುಬ್ರಹ್ಮಣ್ಯ ಭಟ್ಟರಿಗೆ ಕಸಾಪ ರಾಜ್ಯ ಸಮ್ಮೇಳನದಲ್ಲಿ ಸನ್ಮಾನ, ಜಿಲ್ಲಾ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಸಹಿತ ಹಲವು ಕಡೆಗಳಲ್ಲಿ ಸನ್ಮಾನಗಳು, ಶಿಷ್ಯರಿಂದ ಅಭಿನಂದನಾ ಕಾರ್ಯಕ್ರಮಗಳು ನಡೆದಿವೆ. ಕಳೆದ ವರ್ಷ ಮಂಗಳೂರಿನಲ್ಲಿ ಅವರ ಶಿಷ್ಯರ ಸಮಾವೇಶ ನಡೆದಿತ್ತು. ತೆಂಕುತಿಟ್ಟಿನ ಪ್ರಸಕ್ತ ಹಿಮ್ಮೇಳ ಕಲಾವಿದರ ಪೈಕಿ ಬಹುತೇಕರು ಮಾಂಬಾಡಿ ಶಿಷ್ಯರಾಗಿದ್ದು, ದ.ಕ, ಕಾಸರಗೋಡು ಅಲ್ಲದೆ ಬೆಂಗಳೂರಿನಲ್ಲೂ ಶಿಷ್ಯರಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

4 hours ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

5 hours ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

13 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

22 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

1 day ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

1 day ago