Advertisement
ಸುದ್ದಿಗಳು

ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಆಸ್ಥಾನ ವಿದ್ವಾನ್ ಗೌರವ

Share

ಮಂಗಳೂರು: ಬೆಂಗಳೂರಿನ ಶ್ರೀ ಅವನಿ ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಂನ ಶ್ರೀ ಶಾರದಾ ಪೀಠ ವತಿಯಿಂದ ಅಕ್ಟೋಬರ್ 8ರಂದು ನಡೆಯುವ ಸಮಾರಂಭದಲ್ಲಿ ತೆಂಕುತಿಟ್ಟು ಯಕ್ಷಗಾನದ ಹಿರಿಯ ಕಲಾವಿದ, ಯಕ್ಷಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರನ್ನು ಆಸ್ಥಾನ ವಿದ್ವಾನ್ ಪ್ರಶಸ್ತಿ ನೀಡಿ ಸನ್ಮಾನಿಸಲಿದೆ.

ನಾನಾ ಕ್ಷೇತ್ರಗಳಲ್ಲಿ ದುಡಿದ ಒಟ್ಟ ಐವರು ಮಹನೀಯರಿಗೆ ಈ ಪ್ರಶಸ್ತಿ ದೊರಕಲಿದ್ದು, ತೆಂಕುತಿಟ್ಟು ಯಕ್ಷಗಾನ ಕ್ಷೇತ್ರದ ಕಲಾವಿದರೊಬ್ಬರಿಗೆ ಅವನಿ ಶೃಂಗೇರಿ ಪೀಠದಿಂದ ಇದೇ ಮೊದಲ ಬಾರಿಗೆ ಆಸ್ಥಾನ ವಿದ್ವಾನ್ ಬಿರುದು ನೀಡಲಾಗುತ್ತಿದೆ ಎಂದು ಮಠದ ಭಕ್ತವೃಂದದವರಾದ ಶರವೂರು ಸುಬ್ರಹ್ಮಣ್ಯ ರಾವ್ ತಿಳಿಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀಪುರಂನ ಪಶ್ಚಿಮ ಕಾರ್ಡ್ ರಸ್ತೆಯಲ್ಲಿ ಅವನಿ ಶ್ರೀ ಶಾರದಾಪೀಠಂ ಮಠವಿದ್ದು, ಇಲ್ಲಿ ಕಾರ್ಯಕ್ರಮ ನಡೆಯಲಿದೆ. ತೆಂಕುತಿಟ್ಟಿನಲ್ಲಿ ಸುಮಾರು 60 ವರ್ಷಗಳ ಅನುಭವ ಇರುವ 71ರ ಹರೆಯದ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರು ಹಿಂದೆ ಧರ್ಮಸ್ಥಳ, ಕದ್ರಿ, ಕಟೀಲು ಸಹಿತ ನಾನಾ ಮೇಳಗಳಲ್ಲಿ ಹಿಮ್ಮೇಳವಾದಕರಾಗಿ ದುಡಿದಿದ್ದಾರೆ. ಕಳೆದ 50 ವರ್ಷಗಳಿಂದ ಅವರು ಹಿಮ್ಮೇಳ ಶಿಕ್ಷಣ ನೀಡುತ್ತಿದ್ದು, ಸಾವಿರಾರು ಶಿಷ್ಯರನ್ನು ಹೊಂದಿದ್ದಾರೆ. ಈಗಾಗಲೇ ಸುಬ್ರಹ್ಮಣ್ಯ ಭಟ್ಟರಿಗೆ ಕಸಾಪ ರಾಜ್ಯ ಸಮ್ಮೇಳನದಲ್ಲಿ ಸನ್ಮಾನ, ಜಿಲ್ಲಾ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಸಹಿತ ಹಲವು ಕಡೆಗಳಲ್ಲಿ ಸನ್ಮಾನಗಳು, ಶಿಷ್ಯರಿಂದ ಅಭಿನಂದನಾ ಕಾರ್ಯಕ್ರಮಗಳು ನಡೆದಿವೆ. ಕಳೆದ ವರ್ಷ ಮಂಗಳೂರಿನಲ್ಲಿ ಅವರ ಶಿಷ್ಯರ ಸಮಾವೇಶ ನಡೆದಿತ್ತು. ತೆಂಕುತಿಟ್ಟಿನ ಪ್ರಸಕ್ತ ಹಿಮ್ಮೇಳ ಕಲಾವಿದರ ಪೈಕಿ ಬಹುತೇಕರು ಮಾಂಬಾಡಿ ಶಿಷ್ಯರಾಗಿದ್ದು, ದ.ಕ, ಕಾಸರಗೋಡು ಅಲ್ಲದೆ ಬೆಂಗಳೂರಿನಲ್ಲೂ ಶಿಷ್ಯರಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

4 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

23 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago