Advertisement
ಸುದ್ದಿಗಳು

ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಆಸ್ಥಾನ ವಿದ್ವಾನ್ ಗೌರವ

Share

ಮಂಗಳೂರು: ಬೆಂಗಳೂರಿನ ಶ್ರೀ ಅವನಿ ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಂನ ಶ್ರೀ ಶಾರದಾ ಪೀಠ ವತಿಯಿಂದ ಅಕ್ಟೋಬರ್ 8ರಂದು ನಡೆಯುವ ಸಮಾರಂಭದಲ್ಲಿ ತೆಂಕುತಿಟ್ಟು ಯಕ್ಷಗಾನದ ಹಿರಿಯ ಕಲಾವಿದ, ಯಕ್ಷಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರನ್ನು ಆಸ್ಥಾನ ವಿದ್ವಾನ್ ಪ್ರಶಸ್ತಿ ನೀಡಿ ಸನ್ಮಾನಿಸಲಿದೆ.

ನಾನಾ ಕ್ಷೇತ್ರಗಳಲ್ಲಿ ದುಡಿದ ಒಟ್ಟ ಐವರು ಮಹನೀಯರಿಗೆ ಈ ಪ್ರಶಸ್ತಿ ದೊರಕಲಿದ್ದು, ತೆಂಕುತಿಟ್ಟು ಯಕ್ಷಗಾನ ಕ್ಷೇತ್ರದ ಕಲಾವಿದರೊಬ್ಬರಿಗೆ ಅವನಿ ಶೃಂಗೇರಿ ಪೀಠದಿಂದ ಇದೇ ಮೊದಲ ಬಾರಿಗೆ ಆಸ್ಥಾನ ವಿದ್ವಾನ್ ಬಿರುದು ನೀಡಲಾಗುತ್ತಿದೆ ಎಂದು ಮಠದ ಭಕ್ತವೃಂದದವರಾದ ಶರವೂರು ಸುಬ್ರಹ್ಮಣ್ಯ ರಾವ್ ತಿಳಿಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀಪುರಂನ ಪಶ್ಚಿಮ ಕಾರ್ಡ್ ರಸ್ತೆಯಲ್ಲಿ ಅವನಿ ಶ್ರೀ ಶಾರದಾಪೀಠಂ ಮಠವಿದ್ದು, ಇಲ್ಲಿ ಕಾರ್ಯಕ್ರಮ ನಡೆಯಲಿದೆ. ತೆಂಕುತಿಟ್ಟಿನಲ್ಲಿ ಸುಮಾರು 60 ವರ್ಷಗಳ ಅನುಭವ ಇರುವ 71ರ ಹರೆಯದ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರು ಹಿಂದೆ ಧರ್ಮಸ್ಥಳ, ಕದ್ರಿ, ಕಟೀಲು ಸಹಿತ ನಾನಾ ಮೇಳಗಳಲ್ಲಿ ಹಿಮ್ಮೇಳವಾದಕರಾಗಿ ದುಡಿದಿದ್ದಾರೆ. ಕಳೆದ 50 ವರ್ಷಗಳಿಂದ ಅವರು ಹಿಮ್ಮೇಳ ಶಿಕ್ಷಣ ನೀಡುತ್ತಿದ್ದು, ಸಾವಿರಾರು ಶಿಷ್ಯರನ್ನು ಹೊಂದಿದ್ದಾರೆ. ಈಗಾಗಲೇ ಸುಬ್ರಹ್ಮಣ್ಯ ಭಟ್ಟರಿಗೆ ಕಸಾಪ ರಾಜ್ಯ ಸಮ್ಮೇಳನದಲ್ಲಿ ಸನ್ಮಾನ, ಜಿಲ್ಲಾ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಸಹಿತ ಹಲವು ಕಡೆಗಳಲ್ಲಿ ಸನ್ಮಾನಗಳು, ಶಿಷ್ಯರಿಂದ ಅಭಿನಂದನಾ ಕಾರ್ಯಕ್ರಮಗಳು ನಡೆದಿವೆ. ಕಳೆದ ವರ್ಷ ಮಂಗಳೂರಿನಲ್ಲಿ ಅವರ ಶಿಷ್ಯರ ಸಮಾವೇಶ ನಡೆದಿತ್ತು. ತೆಂಕುತಿಟ್ಟಿನ ಪ್ರಸಕ್ತ ಹಿಮ್ಮೇಳ ಕಲಾವಿದರ ಪೈಕಿ ಬಹುತೇಕರು ಮಾಂಬಾಡಿ ಶಿಷ್ಯರಾಗಿದ್ದು, ದ.ಕ, ಕಾಸರಗೋಡು ಅಲ್ಲದೆ ಬೆಂಗಳೂರಿನಲ್ಲೂ ಶಿಷ್ಯರಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

13 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

20 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

1 day ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

1 day ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

1 day ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago