ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪುಣ್ಯತಿಥಿ ಆಚರಣೆ

October 31, 2019
9:49 PM

ಸುಳ್ಯ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪುಣ್ಯತಿಥಿ ಆಚರಣೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ನಡೆಸಲಾಯಿತು. ನುಡಿನಮನ ಸಲ್ಲಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ, ಇಂದಿರಾ ￰ಗಾಂಧಿ ಯವರು ಸಾಮಾಜಿಕ ನ್ಯಾಯವನ್ನು ತಮ್ಮ ಆಡಳಿತದಲ್ಲಿ ಅಳವಡಿಸಿ ಭಾರತದ ಅಭಿವೃದ್ದಿಯಲ್ಲಿ ತನ್ನದೇ ಆದ ಚಾಪನ್ನು ಮೂಡಿಸಿದವರು. ಅವರೊಬ್ಬ ಸಾರ್ವಕಾಲಿಕ ನಾಯಕಿಯಾಗಿ ಇಂದಿಗೂ ಆದರ್ಶಪ್ರಾಯರಾಗಿದ್ದಾರೆ ಎಂದು ಹೇಳಿದರು. ಕೆಪಿಸಿಸಿ ಮಾಜಿ ಕಾರ್ಯದರ್ಶಿ ಭರತ್ ಮುಂಡೋಡಿ ನುಡಿನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೇನಾಲ, ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಶ್ರೀಹರಿ ಕುಕ್ಕುಡೇಲು, ಪಕ್ಷದ ವಕ್ತಾರ ನಂದರಾಜ್ ಸಂಕೇಶ, ಮಾಧ್ಯಮ ಸಂಯೋಜಕ ಭವಾನಿಶಂಕರ್ ಕಲ್ಮಡ್ಕ, ಡಿಸಿಸಿ ಸದಸ್ಯೆ ಜ್ಯೂಲಿಯನ ಕ್ರಾಸ್ತಾ , ನಗರ ಪಂಚಾಯತ್ ಸದಸ್ಯ ಧೀರಾ ಕ್ರಾಸ್ತಾ, ಮಹಮ್ಮದ್ ಪವಾಜ್ , ಯುವಕಾಂಗ್ರೆಸ್ ಉಪಾಧ್ಯಕ್ಷ ಶಾಫಿ ಕುತ್ತಮೊಟ್ಟೆ , ಗಂಗಾಧರ ಮೇನಾಲ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror