ಸುಳ್ಯ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪುಣ್ಯತಿಥಿ ಆಚರಣೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ನಡೆಸಲಾಯಿತು. ನುಡಿನಮನ ಸಲ್ಲಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ, ಇಂದಿರಾ ಗಾಂಧಿ ಯವರು ಸಾಮಾಜಿಕ ನ್ಯಾಯವನ್ನು ತಮ್ಮ ಆಡಳಿತದಲ್ಲಿ ಅಳವಡಿಸಿ ಭಾರತದ ಅಭಿವೃದ್ದಿಯಲ್ಲಿ ತನ್ನದೇ ಆದ ಚಾಪನ್ನು ಮೂಡಿಸಿದವರು. ಅವರೊಬ್ಬ ಸಾರ್ವಕಾಲಿಕ ನಾಯಕಿಯಾಗಿ ಇಂದಿಗೂ ಆದರ್ಶಪ್ರಾಯರಾಗಿದ್ದಾರೆ ಎಂದು ಹೇಳಿದರು. ಕೆಪಿಸಿಸಿ ಮಾಜಿ ಕಾರ್ಯದರ್ಶಿ ಭರತ್ ಮುಂಡೋಡಿ ನುಡಿನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೇನಾಲ, ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಶ್ರೀಹರಿ ಕುಕ್ಕುಡೇಲು, ಪಕ್ಷದ ವಕ್ತಾರ ನಂದರಾಜ್ ಸಂಕೇಶ, ಮಾಧ್ಯಮ ಸಂಯೋಜಕ ಭವಾನಿಶಂಕರ್ ಕಲ್ಮಡ್ಕ, ಡಿಸಿಸಿ ಸದಸ್ಯೆ ಜ್ಯೂಲಿಯನ ಕ್ರಾಸ್ತಾ , ನಗರ ಪಂಚಾಯತ್ ಸದಸ್ಯ ಧೀರಾ ಕ್ರಾಸ್ತಾ, ಮಹಮ್ಮದ್ ಪವಾಜ್ , ಯುವಕಾಂಗ್ರೆಸ್ ಉಪಾಧ್ಯಕ್ಷ ಶಾಫಿ ಕುತ್ತಮೊಟ್ಟೆ , ಗಂಗಾಧರ ಮೇನಾಲ ಉಪಸ್ಥಿತರಿದ್ದರು.
ಅಡಿಕೆ ಬೆಳೆಗಾರರಿಗೆ ಜೂನ್ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…
ಅಹಮದಾಬಾದ್ ನಲ್ಲಿ ಸಂಭವಿಸಿದ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದ್ದು, ತನಿಖೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515690
ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…