ಸುಳ್ಯ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪುಣ್ಯತಿಥಿ ಆಚರಣೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ನಡೆಸಲಾಯಿತು. ನುಡಿನಮನ ಸಲ್ಲಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ, ಇಂದಿರಾ ಗಾಂಧಿ ಯವರು ಸಾಮಾಜಿಕ ನ್ಯಾಯವನ್ನು ತಮ್ಮ ಆಡಳಿತದಲ್ಲಿ ಅಳವಡಿಸಿ ಭಾರತದ ಅಭಿವೃದ್ದಿಯಲ್ಲಿ ತನ್ನದೇ ಆದ ಚಾಪನ್ನು ಮೂಡಿಸಿದವರು. ಅವರೊಬ್ಬ ಸಾರ್ವಕಾಲಿಕ ನಾಯಕಿಯಾಗಿ ಇಂದಿಗೂ ಆದರ್ಶಪ್ರಾಯರಾಗಿದ್ದಾರೆ ಎಂದು ಹೇಳಿದರು. ಕೆಪಿಸಿಸಿ ಮಾಜಿ ಕಾರ್ಯದರ್ಶಿ ಭರತ್ ಮುಂಡೋಡಿ ನುಡಿನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೇನಾಲ, ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಶ್ರೀಹರಿ ಕುಕ್ಕುಡೇಲು, ಪಕ್ಷದ ವಕ್ತಾರ ನಂದರಾಜ್ ಸಂಕೇಶ, ಮಾಧ್ಯಮ ಸಂಯೋಜಕ ಭವಾನಿಶಂಕರ್ ಕಲ್ಮಡ್ಕ, ಡಿಸಿಸಿ ಸದಸ್ಯೆ ಜ್ಯೂಲಿಯನ ಕ್ರಾಸ್ತಾ , ನಗರ ಪಂಚಾಯತ್ ಸದಸ್ಯ ಧೀರಾ ಕ್ರಾಸ್ತಾ, ಮಹಮ್ಮದ್ ಪವಾಜ್ , ಯುವಕಾಂಗ್ರೆಸ್ ಉಪಾಧ್ಯಕ್ಷ ಶಾಫಿ ಕುತ್ತಮೊಟ್ಟೆ , ಗಂಗಾಧರ ಮೇನಾಲ ಉಪಸ್ಥಿತರಿದ್ದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…