ಸುಳ್ಯ: ಕರ್ನಾಟಕದ ಮಾಜಿ ಸಚಿವರು ಹಾಗೂ ಮೈಸೂರಿನ ನರಸಿಂಹರಾಜ ಕ್ಷೇತ್ರದ ಶಾಸಕರು ಆದ ತನ್ವೀರ್ ಸೇಠ್ ರವರ ಮೇಲಿನ ಕೊಲೆ ಯತ್ನ ಆಘಾತಕಾರಿ ಹಾಗೂ ಖಂಡನೀಯವೆಂದು ಕರ್ನಾಟಕ ಮುಸ್ಲಿಂ ಜಮಾಅತ್ ನ ಸುಳ್ಯ ತಾಲೂಕು ಸಮಿತಿಯ ಅಧ್ಯಕ್ಷರಾದ ಮಹಮ್ಮದ್ ಕುಂಞ ಗೂನಡ್ಕರವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮುಸ್ಲಿಂ ಸಮುದಾಯದ ಹಿರಿಯ ನಾಯಕರು ಹಾಗೂ ಮಾಜಿ ಸಚಿವರಾದ ದಿವಂಗತ ಅಜೀಜ್ ಸೇಠ್ ರವರ ಪುತ್ರರಾದ ತನ್ವೀರ್ ಸೇಠ್ ರವರು ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಇಲಾಖೆಯ ಸಚಿವರಾಗಿದ್ದ ವೇಳೆ ಪ್ರಮುಖವಾಗಿ ಮುಸ್ಲಿಂ ಸಮುದಾಯದ ಏಳಿಗೆಗಾಗಿ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೊಳಿಸಿದ್ದರು. ದುಷ್ಕರ್ಮಿಗಳಿಂದ ಅವರ ಮೇಲೆ ನಡೆದಂತಹ ಹಲ್ಲೆಯು ಪ್ರಜ್ಞಾವಂತ ಸಮಾಜವು ತಲೆತಗ್ಗಿಸುವಂತಹ ವಿಚಾರವಾಗಿದ್ದು ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯಿಂದ ಆಗ್ರಹಿಸುತ್ತೇವೆಂದು ಅವರು ತಿಳಿಸಿದ್ದಾರೆ.
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…