ಬೆಳ್ಳಾರೆ: ಮಾಡಾವು ಸನ್ ಸ್ಟೇಶನ್ ಕಾಂಗಾರಿ ಚುರುಕಾಗಲು ವಿದ್ಯುತ್ ತಂತಿ ಎಳೆಯುವ ಕಾರ್ಯ ನಡೆಯಬೇಕಿದೆ. ಇದಕ್ಕಾಗಿ ಕೆಲವೊಂದು ಮರಗಳ ತೆರವಿಗೆ ಅರಣ್ಯ ಇಲಾಖೆ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಪುತ್ತೂರು ಅರಣ್ಯ ಇಲಾಖೆಗೆ ಜೂ.6 ರಂದು ವಿದ್ಯುತ್ ಬಳಕೆದಾರರು ಭೇಟಿ ನೀಡಲಿದ್ದಾರೆ.
ಸುಳ್ಯ ತಾಲೂಕಿನಲ್ಲಿ ವಿದ್ಯುತ್ ಸರಬರಾಜು ಶೋಚನೀಯ ಸ್ಥಿತಿಯಲ್ಲಿದೆ. ಬಂಟ್ವಾಳ, ಪುತ್ತೂರು ತಾಲೂಕಿಡೀ 24 ಗಂಟೆ ಗುಣಮಟ್ಟದ ವಿದ್ಯುತ್ ಇದೆ.
ಸುಳ್ಯದಲ್ಲಿ ತೀರಾ ಕಮ್ಮಿ ವೋಲ್ಟೇಜ್ ನ ವಿದ್ಯುತ್ ಸರಬರಾಜಾಗುತ್ತಿದೆ. ನೀರಿದ್ದರೂ ತೋಟಕ್ಕೆ ನೀರು ಹಾಕಲಾಗದ ಅಸಹಾಯಕ ಸ್ಥಿತಿ . ಇದು ಪರಿಹಾರವಾಗಬೇಕಾದರೆ ಮಾಡಾವಿನಲ್ಲಿ ಸಬ್ ಸ್ಟೇಷನ್ ನಿರ್ಮಾಣವಾಗಬೇಕಿದೆ. ಈ ಸಬ್ ಸ್ಟೇಷನ್ ಗೆ ನೆಟ್ಲ ಮುಡ್ನೂರ್ ಸ್ಟೇಷನ್ ನಿಂದ ವಿದ್ಯುತ್ ಲೈನ್ ಬರಬೇಕಿರುವ ಮಾರ್ಗವಿಡೀ ಮರಗಳನ್ನು ಕಡಿಯಬೇಕಿದ್ದು ,ಅರಣ್ಯ ಇಲಾಖೆಯ ಅನುಮತಿ ಬೇಕಿದೆ. ಇದಕ್ಕಾಗಿ ಪುತ್ತೂರು ಉಪವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳನ್ನು ಒತ್ತಾಯಿಸಲು ವಿದ್ಯುತ್ ಬಳಕೆದಾರರು ಭಾಗವಹಿಸಲಿದ್ದಾರೆ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…