ಬೆಳ್ಳಾರೆ: ಮಾಡಾವು ಸನ್ ಸ್ಟೇಶನ್ ಕಾಂಗಾರಿ ಚುರುಕಾಗಲು ವಿದ್ಯುತ್ ತಂತಿ ಎಳೆಯುವ ಕಾರ್ಯ ನಡೆಯಬೇಕಿದೆ. ಇದಕ್ಕಾಗಿ ಕೆಲವೊಂದು ಮರಗಳ ತೆರವಿಗೆ ಅರಣ್ಯ ಇಲಾಖೆ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಪುತ್ತೂರು ಅರಣ್ಯ ಇಲಾಖೆಗೆ ಜೂ.6 ರಂದು ವಿದ್ಯುತ್ ಬಳಕೆದಾರರು ಭೇಟಿ ನೀಡಲಿದ್ದಾರೆ.
ಸುಳ್ಯ ತಾಲೂಕಿನಲ್ಲಿ ವಿದ್ಯುತ್ ಸರಬರಾಜು ಶೋಚನೀಯ ಸ್ಥಿತಿಯಲ್ಲಿದೆ. ಬಂಟ್ವಾಳ, ಪುತ್ತೂರು ತಾಲೂಕಿಡೀ 24 ಗಂಟೆ ಗುಣಮಟ್ಟದ ವಿದ್ಯುತ್ ಇದೆ.
ಸುಳ್ಯದಲ್ಲಿ ತೀರಾ ಕಮ್ಮಿ ವೋಲ್ಟೇಜ್ ನ ವಿದ್ಯುತ್ ಸರಬರಾಜಾಗುತ್ತಿದೆ. ನೀರಿದ್ದರೂ ತೋಟಕ್ಕೆ ನೀರು ಹಾಕಲಾಗದ ಅಸಹಾಯಕ ಸ್ಥಿತಿ . ಇದು ಪರಿಹಾರವಾಗಬೇಕಾದರೆ ಮಾಡಾವಿನಲ್ಲಿ ಸಬ್ ಸ್ಟೇಷನ್ ನಿರ್ಮಾಣವಾಗಬೇಕಿದೆ. ಈ ಸಬ್ ಸ್ಟೇಷನ್ ಗೆ ನೆಟ್ಲ ಮುಡ್ನೂರ್ ಸ್ಟೇಷನ್ ನಿಂದ ವಿದ್ಯುತ್ ಲೈನ್ ಬರಬೇಕಿರುವ ಮಾರ್ಗವಿಡೀ ಮರಗಳನ್ನು ಕಡಿಯಬೇಕಿದ್ದು ,ಅರಣ್ಯ ಇಲಾಖೆಯ ಅನುಮತಿ ಬೇಕಿದೆ. ಇದಕ್ಕಾಗಿ ಪುತ್ತೂರು ಉಪವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳನ್ನು ಒತ್ತಾಯಿಸಲು ವಿದ್ಯುತ್ ಬಳಕೆದಾರರು ಭಾಗವಹಿಸಲಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…