ಬೆಳ್ಳಾರೆ: ಮಾಡಾವು ಸನ್ ಸ್ಟೇಶನ್ ಕಾಂಗಾರಿ ಚುರುಕಾಗಲು ವಿದ್ಯುತ್ ತಂತಿ ಎಳೆಯುವ ಕಾರ್ಯ ನಡೆಯಬೇಕಿದೆ. ಇದಕ್ಕಾಗಿ ಕೆಲವೊಂದು ಮರಗಳ ತೆರವಿಗೆ ಅರಣ್ಯ ಇಲಾಖೆ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಪುತ್ತೂರು ಅರಣ್ಯ ಇಲಾಖೆಗೆ ಜೂ.6 ರಂದು ವಿದ್ಯುತ್ ಬಳಕೆದಾರರು ಭೇಟಿ ನೀಡಲಿದ್ದಾರೆ.
ಸುಳ್ಯ ತಾಲೂಕಿನಲ್ಲಿ ವಿದ್ಯುತ್ ಸರಬರಾಜು ಶೋಚನೀಯ ಸ್ಥಿತಿಯಲ್ಲಿದೆ. ಬಂಟ್ವಾಳ, ಪುತ್ತೂರು ತಾಲೂಕಿಡೀ 24 ಗಂಟೆ ಗುಣಮಟ್ಟದ ವಿದ್ಯುತ್ ಇದೆ.
ಸುಳ್ಯದಲ್ಲಿ ತೀರಾ ಕಮ್ಮಿ ವೋಲ್ಟೇಜ್ ನ ವಿದ್ಯುತ್ ಸರಬರಾಜಾಗುತ್ತಿದೆ. ನೀರಿದ್ದರೂ ತೋಟಕ್ಕೆ ನೀರು ಹಾಕಲಾಗದ ಅಸಹಾಯಕ ಸ್ಥಿತಿ . ಇದು ಪರಿಹಾರವಾಗಬೇಕಾದರೆ ಮಾಡಾವಿನಲ್ಲಿ ಸಬ್ ಸ್ಟೇಷನ್ ನಿರ್ಮಾಣವಾಗಬೇಕಿದೆ. ಈ ಸಬ್ ಸ್ಟೇಷನ್ ಗೆ ನೆಟ್ಲ ಮುಡ್ನೂರ್ ಸ್ಟೇಷನ್ ನಿಂದ ವಿದ್ಯುತ್ ಲೈನ್ ಬರಬೇಕಿರುವ ಮಾರ್ಗವಿಡೀ ಮರಗಳನ್ನು ಕಡಿಯಬೇಕಿದ್ದು ,ಅರಣ್ಯ ಇಲಾಖೆಯ ಅನುಮತಿ ಬೇಕಿದೆ. ಇದಕ್ಕಾಗಿ ಪುತ್ತೂರು ಉಪವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳನ್ನು ಒತ್ತಾಯಿಸಲು ವಿದ್ಯುತ್ ಬಳಕೆದಾರರು ಭಾಗವಹಿಸಲಿದ್ದಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…