ಬೆಳ್ಳಾರೆ: ಮಾಡಾವು ಸನ್ ಸ್ಟೇಶನ್ ಕಾಂಗಾರಿ ಚುರುಕಾಗಲು ವಿದ್ಯುತ್ ತಂತಿ ಎಳೆಯುವ ಕಾರ್ಯ ನಡೆಯಬೇಕಿದೆ. ಇದಕ್ಕಾಗಿ ಕೆಲವೊಂದು ಮರಗಳ ತೆರವಿಗೆ ಅರಣ್ಯ ಇಲಾಖೆ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಪುತ್ತೂರು ಅರಣ್ಯ ಇಲಾಖೆಗೆ ಜೂ.6 ರಂದು ವಿದ್ಯುತ್ ಬಳಕೆದಾರರು ಭೇಟಿ ನೀಡಲಿದ್ದಾರೆ.
ಸುಳ್ಯ ತಾಲೂಕಿನಲ್ಲಿ ವಿದ್ಯುತ್ ಸರಬರಾಜು ಶೋಚನೀಯ ಸ್ಥಿತಿಯಲ್ಲಿದೆ. ಬಂಟ್ವಾಳ, ಪುತ್ತೂರು ತಾಲೂಕಿಡೀ 24 ಗಂಟೆ ಗುಣಮಟ್ಟದ ವಿದ್ಯುತ್ ಇದೆ.
ಸುಳ್ಯದಲ್ಲಿ ತೀರಾ ಕಮ್ಮಿ ವೋಲ್ಟೇಜ್ ನ ವಿದ್ಯುತ್ ಸರಬರಾಜಾಗುತ್ತಿದೆ. ನೀರಿದ್ದರೂ ತೋಟಕ್ಕೆ ನೀರು ಹಾಕಲಾಗದ ಅಸಹಾಯಕ ಸ್ಥಿತಿ . ಇದು ಪರಿಹಾರವಾಗಬೇಕಾದರೆ ಮಾಡಾವಿನಲ್ಲಿ ಸಬ್ ಸ್ಟೇಷನ್ ನಿರ್ಮಾಣವಾಗಬೇಕಿದೆ. ಈ ಸಬ್ ಸ್ಟೇಷನ್ ಗೆ ನೆಟ್ಲ ಮುಡ್ನೂರ್ ಸ್ಟೇಷನ್ ನಿಂದ ವಿದ್ಯುತ್ ಲೈನ್ ಬರಬೇಕಿರುವ ಮಾರ್ಗವಿಡೀ ಮರಗಳನ್ನು ಕಡಿಯಬೇಕಿದ್ದು ,ಅರಣ್ಯ ಇಲಾಖೆಯ ಅನುಮತಿ ಬೇಕಿದೆ. ಇದಕ್ಕಾಗಿ ಪುತ್ತೂರು ಉಪವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳನ್ನು ಒತ್ತಾಯಿಸಲು ವಿದ್ಯುತ್ ಬಳಕೆದಾರರು ಭಾಗವಹಿಸಲಿದ್ದಾರೆ.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…