Advertisement
ಕೃಷಿ

ಮಾಡಾವು ವಿದ್ಯುತ್ ಸಬ್ ಸ್ಟೇಶನ್ ಆದರೆ ಏನು ಪ್ರಯೋಜನ ?

Share

ಸುಳ್ಯ: ಅನೇಕ ವರ್ಷಗಳ ಬಳಿಕ ವಿದ್ಯುತ್ ಸಮಸ್ಯೆ ನಿವಾರಣೆಯ ಕನಸು ಹತ್ತಿರವಾಗುತ್ತಿದೆ. ಸುಳ್ಯದ ಕಡೆಗೂ ನಿರಂತರ ವಿದ್ಯುತ್ ಭಾಗ್ಯ ಕಾಣುವಂತಾಗುತ್ತದೋ ಎಂಬ ನಿರೀಕ್ಷೆ ಹೆಚ್ಚಾಗಿದೆ. ಸುಳ್ಯ ಶಾಸಕರು ಎಲರ್ಟ್ ಆದಂತೆ ಕಾಣುತ್ತದೆ. ಹಾಗಾದರೆ ಮಾಡಾವು ವಿದ್ಯುತ್ ಸಬ್ ಸ್ಟೇಶನ್ ಆದರೆ ಏನು ಪ್ರಯೋಜನ, ಹೇಗಿದೆ ಈ ಯೋಜನೆ ?

ಈ ಯೋಜನೆ ಹೀಗಿದೆ :

ನೆಟ್ಲಮುಡ್ನೂರಿನಿಂದ ಮಾಡಾವಿಗೆ 110 ಕೆ ವಿ ವಿದ್ಯುತ್ ಲೈನ್ ಎಳೆಯುವ ಮೂಲಕ ಮಾಡಾವಿನಲ್ಲಿ ಸಬ್ ಸ್ಟೇಷನ್ ಆರಂಭವಾಗುತ್ತದೆ. ಮಾಡಾವಿನಿಂದ ಸುಳ್ಯ- ಕಡಬ ಹಾಗೂ ಆಲಂಕಾರಿಗೆ ವಿದ್ಯುತ್ ಸರಬರಾಜು ಮಾಡುವ  ಯೋಜನೆ ಇದಾಗಿದೆ. ಕಬಕದಿಂದ ಮಾಡಾವು ತನಕ ಒಟ್ಟು 27 ಕಿ ಮೀ ದೂರದಲ್ಲಿ ಲೈನ್ ಎಳೆಯುವ ಕಾಮಗಾರಿ ನಡೆಯುತ್ತಿದೆ. ಒಟ್ಟು 107 ವಿದ್ಯುತ್ ಲೈನ್ ಟವರ್ ಗಳ ನಿರ್ಮಾಣ ಪ್ರಗತಿಯಲ್ಲಿದೆ.
ಮಾಡಾವಿನಲ್ಲಿ ಸಬ್ ಸ್ಟೇಷನ್ ಆರಂಭವಾದಲ್ಲಿ ಸುಳ್ಯ , ಆಲಂಕಾರು , ಕುಂಬ್ರ ಮತ್ತು ಕಡಬ ಭಾಗದಲ್ಲಿ ವಿದ್ಯುತ್ ವಿತರಣೆಗೆ ಮುಕ್ತ ಅವಕಾಶ ದೊರೆಯುತ್ತದೆ. ಬಳಿಕ ದಿನದ 24 ಗಂಟೆಯೂ ವಿದ್ಯುತ್ ಪೂರೈಸಲು ಇದು ಸಹಕಾರಿಯಾಗಲಿದೆ.

110 ಕೆವಿ ಲೈನ್ ಆಗಿರುವ ಕಾರಣ ಬೃಹತ್ ಆಕಾರದ ಟವರ್ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಒಂದೊಂದು ಟವರ್‍ಗೆ 7 ರಿಂದ 10 ಸೆಂಟ್ಸ್ ಭೂಮಿ ಬಳಕೆಯಾಗುತ್ತದೆ. 27 ಕಿ ಮೀ ನಲ್ಲಿ ಒಟ್ಟು 107 ಟವರ್ ಗಳ ನಿರ್ಮಾಣ ಕಾಮಗಾರಿ ಬಹುತೇಕ ಮಗಿದಿದೆ ಎಂದು ಕೆಪಿಟಿಸಿಎಲ್ ಅಧಿಕಾರಿಗಳು ಮಾಹಿತಿ ನೀಡಿದರು.

ಯೋಜನೆಯಿಂದ ಏನು ಪ್ರಯೋಜನ?

ಈ ಯೋಜನೆ ಯಶಸ್ವಿಯಾದಲ್ಲಿ ಮಾಡಾವು, ಸುಳ್ಯ, ಆಲಂಕಾರು, ಕಡಬ ಮತ್ತು ಕುಂಬ್ರ ವ್ಯಾಪ್ತಿಯಲ್ಲಿ ಹೆಚ್ಚುವರಿ ವಿದ್ಯುತ್ ವಿತರಣೆಯಾಗುತ್ತದೆ. ಈಗಾಗಲೇ ಈ ಭಾಗದಲ್ಲಿ ಲೋ ವೋಲ್ಟೇಜ್ ಸಮಸ್ಯೆ ಇದ್ದು ಅದಕ್ಕೆ ಪರಿಹಾರ ಕಾಣಲಿದೆ. ದಿನದ 24 ಗಂಟೆಯೂ ವಿದ್ಯುತ್ ನೀಡುವಲ್ಲಿ ಸಹಕಾರಿಯಾಗಲಿದೆ. ಈಗ ಸವಣೂರು ಉಪ ವಿದ್ಯುತ್ ಕೇಂದ್ರದ ಮೂಲಕ ಆಲಂಕಾರು,ಕಡಬ ಮೊದಲಾದೆಡೆ ಸರಬರಜಾಗುತ್ತಿದ್ದು ,ಮಾಡಾವು ಸಬ್‍ಸ್ಟೇಶನ್ ಪೂರ್ಣವಾಗಿ ಕಾರ್ಯಾರಂಭ ಮಾಡಿದರೆ ಸವಣೂರು ಉಪಕೇಂದ್ರ ವ್ಯಾಪ್ತಿಯ ವಿದ್ಯುತ್ ಸಮಸ್ಯೆಯೂ ನಿವಾರಣೆಯಾಗಲಿದೆ.

ಇನ್ನೇನು ಆಗಬೇಕು :

ಈಹ ಸಬ್ ಸ್ಟೇಶನ್ ಕೆಲಸ ಒಂದೆರಡು ತಿಂಗಳಲ್ಲಿ ಮುಗಿಯುತ್ತದೆ. ಕೆಲಸ ಇರುವುದು  ನಂತರವೇ. ವಿದ್ಯುತ್ ತಂತಿ ಎಳೆಯುವ ಕೆಲಸ ನಡೆಯಬೇಕು. ಈಗಾಗಲೇ ಹಲವು ಕಡೆ ವಿರೋಧಗಳು ಇದೆ. ಇದಕ್ಕಾಗಿ ಶಾಸಕರು, ಸಂಸದರು ಜೊತೆಯಾಗಿ ಸೂಕ್ತ ಪರಿಹಾರ ಸೇರಿದಂತೆ ಬೇಕಾದ ಎಲ್ಲಾ ವ್ಯವಸ್ಥೆ ಮಾಡಿಸಿ ತಂತಿ ಎಳೆಯುವ ಕಾರ್ಯದ ಬಗ್ಗೆ ಗಮನಹರಿಸಿದರೆ ಮಾತ್ರವೇ ಸಬ್ ಸ್ಟೇಶನ್ ಚಾಲೂ ಆಗಲು ಸಾಧ್ಯ. ಕನಸುಗಳು ನನಸಾಗಲು ಸಾಧ್ಯ. ಈ ಕಾರ್ಯ ನಡೆಯಬೇಕು, ಶಾಸಕ ಅಂಗಾರ ಅವರು ಇದೇ ಆಸಕ್ತಿ ಅಲ್ಲೂ ವಹಿಸಲೇಬೇಕಿದೆ.  ಹೀಗಾದರೆ ಮಾತ್ರವೇ ಸುಳ್ಯದಲ್ಲಿ ಬೆಳಕು ಮೂಡಲು ಸಾಧ್ಯ. ಇಲ್ಲದೇ ಇದ್ದಲ್ಲಿ ವಿದ್ಯುತ್ ಸಮಸ್ಯೆಗೆ ಮುಕ್ತಿ ಸಿಗದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

4 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

5 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

6 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

18 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

21 hours ago