Advertisement
ಸುದ್ದಿಗಳು

ಮಾಡಾವು 110 ಕೆವಿ ಸಬ್ ಸ್ಟೇಶನ್ | 14 ವರ್ಷಗಳ ಬಳಿಕ ಸ್ವಿಚ್ ಆನ್ ಭಾಗ್ಯ….! | ವಿದ್ಯುತ್ ಬಳಕೆದಾರರಿಗೆ ಈಗ ನಿಜವಾದ ನೆಮ್ಮದಿ |

Share

ಸುಳ್ಯ: 14 ವರ್ಷಗಳ ಹಿಂದೆ ರೂಪುಗೊಂಡ ಮಾಡಾವು 110 ಕೆವಿ ಸಬ್ ಸ್ಟೇಶನ್ ಕಾಮಗಾರಿ ಮುಗಿದಿದೆ. ಶನಿವಾರ ಪ್ರಾಯೋಗಿಕವಾಗಿ ಚಾಲನೆಗೊಂಡಿದೆ. ಕೊನೆಗೂ ಎರಡು ಬಾರಿ ಸ್ವಿಚ್ ಆನ್ ಭಾಗ್ಯ ಕೊನೆಗೂ ಕಂಡಿತು. ಈಗ ವಿದ್ಯುತ್ ಬಳಕೆದಾರರಿಗೆ ನಿಜವಾದ ನೆಮ್ಮದಿ ಸಿಕ್ಕಿದೆ. ಮುಂದಿನ ವರ್ಷ ವಿದ್ಯುತ್ ವೋಲ್ಟೇಜ್ ಸಮಸ್ಯೆಗೆ ಸ್ವಲ್ಪವಾದರೂ ನೆಮ್ಮದಿ ಸಿಕ್ಕೀತು ಎಂಬ ಆಶಾವಾದ ಇದೆ. ಇದರ ಜೊತೆಗೆ ಸುಳ್ಯ 110 ಕೆವಿ ಸಬ್ ಸ್ಟೇಶನ್ ಹಾಗೂ ಗುತ್ತಿಗಾರು 33 ಕೆವಿ ಸಬ್ ಸ್ಟೇಶನ್ ಯಾವಾಗ ಸಿದ್ಧವಾಗುತ್ತದೆ ಎಂಬ ಪ್ರಶ್ನೆಯೂ ಜೊತೆಗೇ ಎದ್ದಿದೆ.

ಕೆಯ್ಯೂರು ಗ್ರಾಮದ ಮಾಡಾವಿನಲ್ಲಿ 110 ಕೆವಿ ಸಬ್ ಸ್ಟೇಶನ್ ಕಾಮಗಾರಿ ಕಳೆದ ಕೆಲವು ದಿನಗಳ ಹಿಂದೆ ಪೂರ್ಣಗೊಂಡಿತ್ತು. ಶನಿವಾರ ಪ್ರಾಯೋಗಿಕವಾಗಿ ಸ್ವಿಚ್ ಆನ್ ಆಗಿದೆ. ಸಬ್ ಸ್ಟೇಶನ್  ಗೆ ವಿದ್ಯುತ್ ತಲುಪಿ ಚಾಲೂ ಆಗಿದೆ.

ಒಂದು  ಫೀಡರ್ ಶನಿವಾರ ಬೆಳಗ್ಗೆ ಮಂಗಳೂರು ವೃತ್ತ ಅಧೀಕ್ಷಕ ಇಂಜಿನಿಯರ್ ರವಿಕಾಂತ ಕಾಮತ್ ಸ್ವಿಚ್ ಆನ್ ಮಾಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಮೆಸ್ಕಾಂ ವಿವಿಧ ಅಧಿಕಾರಿಗಳು ಹಾಗೂ ವಿದ್ಯುತ್ ಬಳಕೆದಾರರ ವೇದಿಕೆ  ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬಳಕೆದಾರರ ವೇದಿಕೆ ಪರವಾಗಿ ಸಂಚಾಲಕ ಜಯಪ್ರಸಾದ್ ಜೋಶಿ ಅಧಿಕಾರಿಗಳಿಗೆ ಶಾಲು ಹೊದೆಸಿ  ಸನ್ಮಾನಿಸಿ ಕಾಮಗಾರಿಯನ್ನು ಪೂರ್ಣಗೊಳಿಸಿ ಪ್ರಾಯೋಗಿಕ ಚಾಲನೆ ನೀಡಿದ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.

 

ಬಳಿಕ ಸುಳ್ಯ ಶಾಸಕ ಎಸ್. ಅಂಗಾರ ಆಗಮಿಸಿ ಇನ್ನೆರಡು ಫೀಡರ್ ಗಳಿಗೆ ಚಾಲನೆ ನೀಡಿದರು.ಈ ಸಂದರ್ಭ ಮೆಸ್ಕಾಂ ಅಧಿಕಾರಿಗಳು,  ತಾ.ಪಂ.ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್, ಬಿಜೆಪಿ ಸುಳ್ಯ ಮಂಡಲದ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಸವಣೂರು ಗ್ರಾಪಂ ಅಧ್ಯಕ್ಷೆ ಇಂದಿರಾ ಬಿ ಕೆ ಮೊದಲಾದವರು ಇದ್ದರು.

14 ವರ್ಷಗಳಿಂದ ಕುಂಟುತ್ತಾ ಸಾಗಿದ ಯೋಜನೆ ಕಳೆದ ವರ್ಷದಿಂದ ವೇಗ ಪಡೆದಿತ್ತು. ಇದಕ್ಕಾಗಿ ವಿದ್ಯುತ್ ಬಳಕೆದಾರರ ವೇದಿಕೆ ಸತತ ಪ್ರಯತ್ನ ಮಾಡಿತ್ತು. ಎಲ್ಲಾ ಬಳಕೆದಾರರನ್ನು ಸೇರಿಸುವ ನಿಟ್ಟಿನಲ್ಲಿ ಹಾಗೂ ಮಾಹಿತಿಗಳನ್ನು  ನೀಡುವ ನಿಟ್ಟಿನಲ್ಲಿ ವಾಟ್ಸಪ್ ಗ್ರೂಪು ರಚನೆ ಮಾಡಿ ಈ ಮೂಲಕ ಮಾಹಿತಿಗಳನ್ನು  ಅಪ್ಡೇಟ್ ಮಾಡುತ್ತಿದ್ದರು ಬೆಳ್ಳಾರೆ ಬಳಕೆದಾರರ ವೇದಿಕೆ ಸಂಚಾಲಕ ಜಯಪ್ರಸಾದ್ ಜೋಶಿ ಅವರ ನೇತೃತ್ವದ ತಂಡ. ಸತತವಾಗಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಸಮಸ್ಯೆಗಳ ಪರಿಹಾರಕ್ಕೆ ಜನಪ್ರತಿನಿಧಿಗಳ ಜೊತೆ ಮಾತುಕತೆ ನಡೆಸಿದ್ದರು, ಅಡೆತಡೆ ನಿವಾರಣೆಗೆ ಪ್ರಯತ್ನ ಮಾಡಿದ್ದರು. ಇದೆಲ್ಲದರ ಪರಿಣಾಮವಾಗಿ ಶೀಘ್ರದಲ್ಲೇ ಕಾಮಗಾರಿ ಮುಗಿಯುವುದಕ್ಕೆ ಕಾರಣವಾಯಿತು. ಬೆಳ್ಳಾರೆ ಬಳಕೆದಾರರ ವೇದಿಕೆ ಸಂಚಾಲಕ ಜಯಪ್ರಸಾದ್ ಜೋಶಿ ಅವರ ನೇತೃತ್ವದ  ಹೋರಾಟಕ್ಕೆ ಕೃಷಿಕರು,  ಸುಳ್ಯ, ಪುತ್ತೂರು ಮತ್ತು ಕಡಬ ತಾಲೂಕುಗಳ ಗ್ರಾಮ ಪಂಚಾಯತ್ ಗಳು, ಇನ್ನಿತರ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿದ್ದವು.

ಇದೀಗ ಸುಳ್ಯ ತಾಲೂಕಿನ ಪ್ರಮುಖ ಬೇಡಿಕೆಯಾದ ಸುಳ್ಯ 110 ಕೆವಿ ಸಬ್ ಸ್ಟೇಶನ್ ಕಾಮಗಾರಿ ಹಾಗೂ ಗುತ್ತಿಗಾರು ಸಬ್ ಸ್ಟೇಶನ್ ಕಾಮಗಾರಿ ವೇಗ ಪಡೆಯಬೇಕಿದೆ. ಗುತ್ತಿಗಾರು ಸಬ್ ಸ್ಟೇಶನ್ ಕಾಮಗಾರಿ ಆರಂಭವಾಗಿ 3 ವರ್ಷ ಕಳೆದಿದೆ.  ಕಾಮಗಾರಿ ವೇಗ ಪಡೆದು ಸಂಪರ್ಕ ಪಡೆಯಬೇಕಿದೆ. ಇದಕ್ಕೆ ಸಂಬಂಧಿತರು ಗಮನಹರಿಸಬೇಕು ಎಂಬ ಒತ್ತಾಯ ವಿದ್ಯುತ್ ಬಳಕೆದಾರರದ್ದಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

8 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

14 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

15 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

15 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

15 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

15 hours ago