ಸುಳ್ಯ: ಮಾದಕ ವಸ್ತುಗಳ ಸೇವನೆ,ದಾಸ್ತಾನು ಮಾರಾಟ,ಮುಂತಾದವುಗಳನ್ನು ಪತ್ತೆಹಚ್ಚಿ ಪೊಲೀಸರಿಗೊಪ್ಪಿಸಲು ಸುಳ್ಯ ವಲಯ SKSSF ವಿಖಾಯ ತಂಡವು ಪಣತೊಟ್ಟಿದೆ.
ಸ್ಥಳೀಯ ಮಟ್ಟದಲ್ಲಿ ವಿಖಾಯ ಸ್ವಯಂ ಸೇವಕರು ಆಯಕಟ್ಟಿನ ಪ್ರದೇಶಗಳಲ್ಲಿ ಈ ಬಗ್ಗೆ ಜಾಗರೂಕರಾಗಿ ನಿಗಾವಹಿಸಲು ಸೂಚಿಸಲಾಗಿದೆ.
ಮಾದಕ ವಸ್ತುಗಳನ್ನು ಉಪಯೋಗಿಸುವುದು ಮಾರಾಟ ಮಾಡುವುದು,ದಾಸ್ತಾನಿರಿಸುವುದು ಗಮನಕ್ಕೆ ಬಂದರೆ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು,ಎಂದು ಸುಳ್ಯ ವಲಯ ವಿಖಾಯ ಕನ್ವೀನರ್ ತಾಜುದ್ದೀನ್ ಟರ್ಲಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಕಾರ್ಯಕರ್ತರು ಭಯಪಡುವ ಅಗತ್ಯವಿಲ್ಲ, ನೀವು ನೀಡುವ ಮಾಹಿತಿಯು ಸಂಪೂರ್ಣ ಗುಪ್ತವಾಗಿರುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದು ಯಾರಿಗಾದರೂ ಕಾರ್ಯಕರ್ತರಿಗೆ ಈ ಬಗ್ಗೆ ಮಾದಕ ವಸ್ತುಗಳ ಬಗ್ಗೆ ಮಾಹಿತಿ ದೊರೆತರೆ ಸುಳ್ಯ ವಲಯ ವಿಖಾಯ ತಂಡಕ್ಕೆ ತಿಸಿದರೆ ವಿಖಾಯ ಸಮಿತಿಯು ಈ ಬಗ್ಗೆ ಇಲಾಖೆಗೆ ದೂರು ನೀಡಳಿರುವುದಾಗಿ ತಿಳಿಸಲಾಗಿದೆ.
ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತೊಡೆದುಹಾಕಲು ವಿಖಾಯ ಸಮಿತಿಯೊಂದಿಗೆ ಸಾರ್ವಜನಿಕರು ಕೂಡಾ ಸಹಕಾರ ನೀಡಬೇಕೆಂದು ಅವರು ಕರೆ ನೀಡಿದ್ದಾರೆ.
ಇದೇ ಬರುವ ಆದಿತ್ಯವಾರ ಮಂಡೆಕೋಲು ಮಸೀದಿಯ ಪರಿಸರದಲ್ಲಿ ನಡೆಯಲಿರುವ ವಿಖಾಯ ತುರ್ತು ಸೇವೆಗಳ ತರಬೇತಿ ಶಿಬಿರದಲ್ಲಿ ಸುಳ್ಯ ಪೊಲೀಸ್ ಠಾಣಾಧಿಕಾರಿ ಕಾನೂನು ಮಾಹಿತಿ ಹಾಗೂ ಮಾದಕ ವಸ್ತುಗಳ ಉಪಯೋಗದಿಂದಾಗುವ ದುಷ್ಪರಿಣಾಮಗಳ ವಿಷಯಗಳ ಬಗ್ಗೆ ಕಾರ್ಯಕರ್ತರಿಗೆ ಮಾಹಿತಿ ನೀಡಲಿದ್ದಾರೆ ಎಂದು ತಾಜುದ್ದೀನ್ ಟರ್ಲಿ ತಿಳಿಸಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.