ಸುಳ್ಯ: ಮಾದಕ ವಸ್ತುಗಳ ಸೇವನೆ,ದಾಸ್ತಾನು ಮಾರಾಟ,ಮುಂತಾದವುಗಳನ್ನು ಪತ್ತೆಹಚ್ಚಿ ಪೊಲೀಸರಿಗೊಪ್ಪಿಸಲು ಸುಳ್ಯ ವಲಯ SKSSF ವಿಖಾಯ ತಂಡವು ಪಣತೊಟ್ಟಿದೆ.
ಸ್ಥಳೀಯ ಮಟ್ಟದಲ್ಲಿ ವಿಖಾಯ ಸ್ವಯಂ ಸೇವಕರು ಆಯಕಟ್ಟಿನ ಪ್ರದೇಶಗಳಲ್ಲಿ ಈ ಬಗ್ಗೆ ಜಾಗರೂಕರಾಗಿ ನಿಗಾವಹಿಸಲು ಸೂಚಿಸಲಾಗಿದೆ.
ಮಾದಕ ವಸ್ತುಗಳನ್ನು ಉಪಯೋಗಿಸುವುದು ಮಾರಾಟ ಮಾಡುವುದು,ದಾಸ್ತಾನಿರಿಸುವುದು ಗಮನಕ್ಕೆ ಬಂದರೆ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು,ಎಂದು ಸುಳ್ಯ ವಲಯ ವಿಖಾಯ ಕನ್ವೀನರ್ ತಾಜುದ್ದೀನ್ ಟರ್ಲಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಕಾರ್ಯಕರ್ತರು ಭಯಪಡುವ ಅಗತ್ಯವಿಲ್ಲ, ನೀವು ನೀಡುವ ಮಾಹಿತಿಯು ಸಂಪೂರ್ಣ ಗುಪ್ತವಾಗಿರುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದು ಯಾರಿಗಾದರೂ ಕಾರ್ಯಕರ್ತರಿಗೆ ಈ ಬಗ್ಗೆ ಮಾದಕ ವಸ್ತುಗಳ ಬಗ್ಗೆ ಮಾಹಿತಿ ದೊರೆತರೆ ಸುಳ್ಯ ವಲಯ ವಿಖಾಯ ತಂಡಕ್ಕೆ ತಿಸಿದರೆ ವಿಖಾಯ ಸಮಿತಿಯು ಈ ಬಗ್ಗೆ ಇಲಾಖೆಗೆ ದೂರು ನೀಡಳಿರುವುದಾಗಿ ತಿಳಿಸಲಾಗಿದೆ.
ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತೊಡೆದುಹಾಕಲು ವಿಖಾಯ ಸಮಿತಿಯೊಂದಿಗೆ ಸಾರ್ವಜನಿಕರು ಕೂಡಾ ಸಹಕಾರ ನೀಡಬೇಕೆಂದು ಅವರು ಕರೆ ನೀಡಿದ್ದಾರೆ.
ಇದೇ ಬರುವ ಆದಿತ್ಯವಾರ ಮಂಡೆಕೋಲು ಮಸೀದಿಯ ಪರಿಸರದಲ್ಲಿ ನಡೆಯಲಿರುವ ವಿಖಾಯ ತುರ್ತು ಸೇವೆಗಳ ತರಬೇತಿ ಶಿಬಿರದಲ್ಲಿ ಸುಳ್ಯ ಪೊಲೀಸ್ ಠಾಣಾಧಿಕಾರಿ ಕಾನೂನು ಮಾಹಿತಿ ಹಾಗೂ ಮಾದಕ ವಸ್ತುಗಳ ಉಪಯೋಗದಿಂದಾಗುವ ದುಷ್ಪರಿಣಾಮಗಳ ವಿಷಯಗಳ ಬಗ್ಗೆ ಕಾರ್ಯಕರ್ತರಿಗೆ ಮಾಹಿತಿ ನೀಡಲಿದ್ದಾರೆ ಎಂದು ತಾಜುದ್ದೀನ್ ಟರ್ಲಿ ತಿಳಿಸಿದ್ದಾರೆ.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…