ಸುಳ್ಯ: ಮಾದಕ ವಸ್ತುಗಳ ಸೇವನೆ,ದಾಸ್ತಾನು ಮಾರಾಟ,ಮುಂತಾದವುಗಳನ್ನು ಪತ್ತೆಹಚ್ಚಿ ಪೊಲೀಸರಿಗೊಪ್ಪಿಸಲು ಸುಳ್ಯ ವಲಯ SKSSF ವಿಖಾಯ ತಂಡವು ಪಣತೊಟ್ಟಿದೆ.
ಸ್ಥಳೀಯ ಮಟ್ಟದಲ್ಲಿ ವಿಖಾಯ ಸ್ವಯಂ ಸೇವಕರು ಆಯಕಟ್ಟಿನ ಪ್ರದೇಶಗಳಲ್ಲಿ ಈ ಬಗ್ಗೆ ಜಾಗರೂಕರಾಗಿ ನಿಗಾವಹಿಸಲು ಸೂಚಿಸಲಾಗಿದೆ.
ಮಾದಕ ವಸ್ತುಗಳನ್ನು ಉಪಯೋಗಿಸುವುದು ಮಾರಾಟ ಮಾಡುವುದು,ದಾಸ್ತಾನಿರಿಸುವುದು ಗಮನಕ್ಕೆ ಬಂದರೆ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು,ಎಂದು ಸುಳ್ಯ ವಲಯ ವಿಖಾಯ ಕನ್ವೀನರ್ ತಾಜುದ್ದೀನ್ ಟರ್ಲಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಕಾರ್ಯಕರ್ತರು ಭಯಪಡುವ ಅಗತ್ಯವಿಲ್ಲ, ನೀವು ನೀಡುವ ಮಾಹಿತಿಯು ಸಂಪೂರ್ಣ ಗುಪ್ತವಾಗಿರುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದು ಯಾರಿಗಾದರೂ ಕಾರ್ಯಕರ್ತರಿಗೆ ಈ ಬಗ್ಗೆ ಮಾದಕ ವಸ್ತುಗಳ ಬಗ್ಗೆ ಮಾಹಿತಿ ದೊರೆತರೆ ಸುಳ್ಯ ವಲಯ ವಿಖಾಯ ತಂಡಕ್ಕೆ ತಿಸಿದರೆ ವಿಖಾಯ ಸಮಿತಿಯು ಈ ಬಗ್ಗೆ ಇಲಾಖೆಗೆ ದೂರು ನೀಡಳಿರುವುದಾಗಿ ತಿಳಿಸಲಾಗಿದೆ.
ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತೊಡೆದುಹಾಕಲು ವಿಖಾಯ ಸಮಿತಿಯೊಂದಿಗೆ ಸಾರ್ವಜನಿಕರು ಕೂಡಾ ಸಹಕಾರ ನೀಡಬೇಕೆಂದು ಅವರು ಕರೆ ನೀಡಿದ್ದಾರೆ.
ಇದೇ ಬರುವ ಆದಿತ್ಯವಾರ ಮಂಡೆಕೋಲು ಮಸೀದಿಯ ಪರಿಸರದಲ್ಲಿ ನಡೆಯಲಿರುವ ವಿಖಾಯ ತುರ್ತು ಸೇವೆಗಳ ತರಬೇತಿ ಶಿಬಿರದಲ್ಲಿ ಸುಳ್ಯ ಪೊಲೀಸ್ ಠಾಣಾಧಿಕಾರಿ ಕಾನೂನು ಮಾಹಿತಿ ಹಾಗೂ ಮಾದಕ ವಸ್ತುಗಳ ಉಪಯೋಗದಿಂದಾಗುವ ದುಷ್ಪರಿಣಾಮಗಳ ವಿಷಯಗಳ ಬಗ್ಗೆ ಕಾರ್ಯಕರ್ತರಿಗೆ ಮಾಹಿತಿ ನೀಡಲಿದ್ದಾರೆ ಎಂದು ತಾಜುದ್ದೀನ್ ಟರ್ಲಿ ತಿಳಿಸಿದ್ದಾರೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…