ಸುಳ್ಯ: ಮಾದಕ ವಸ್ತುಗಳ ಸೇವನೆ,ದಾಸ್ತಾನು ಮಾರಾಟ,ಮುಂತಾದವುಗಳನ್ನು ಪತ್ತೆಹಚ್ಚಿ ಪೊಲೀಸರಿಗೊಪ್ಪಿಸಲು ಸುಳ್ಯ ವಲಯ SKSSF ವಿಖಾಯ ತಂಡವು ಪಣತೊಟ್ಟಿದೆ.
ಸ್ಥಳೀಯ ಮಟ್ಟದಲ್ಲಿ ವಿಖಾಯ ಸ್ವಯಂ ಸೇವಕರು ಆಯಕಟ್ಟಿನ ಪ್ರದೇಶಗಳಲ್ಲಿ ಈ ಬಗ್ಗೆ ಜಾಗರೂಕರಾಗಿ ನಿಗಾವಹಿಸಲು ಸೂಚಿಸಲಾಗಿದೆ.
ಮಾದಕ ವಸ್ತುಗಳನ್ನು ಉಪಯೋಗಿಸುವುದು ಮಾರಾಟ ಮಾಡುವುದು,ದಾಸ್ತಾನಿರಿಸುವುದು ಗಮನಕ್ಕೆ ಬಂದರೆ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು,ಎಂದು ಸುಳ್ಯ ವಲಯ ವಿಖಾಯ ಕನ್ವೀನರ್ ತಾಜುದ್ದೀನ್ ಟರ್ಲಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಕಾರ್ಯಕರ್ತರು ಭಯಪಡುವ ಅಗತ್ಯವಿಲ್ಲ, ನೀವು ನೀಡುವ ಮಾಹಿತಿಯು ಸಂಪೂರ್ಣ ಗುಪ್ತವಾಗಿರುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದು ಯಾರಿಗಾದರೂ ಕಾರ್ಯಕರ್ತರಿಗೆ ಈ ಬಗ್ಗೆ ಮಾದಕ ವಸ್ತುಗಳ ಬಗ್ಗೆ ಮಾಹಿತಿ ದೊರೆತರೆ ಸುಳ್ಯ ವಲಯ ವಿಖಾಯ ತಂಡಕ್ಕೆ ತಿಸಿದರೆ ವಿಖಾಯ ಸಮಿತಿಯು ಈ ಬಗ್ಗೆ ಇಲಾಖೆಗೆ ದೂರು ನೀಡಳಿರುವುದಾಗಿ ತಿಳಿಸಲಾಗಿದೆ.
ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತೊಡೆದುಹಾಕಲು ವಿಖಾಯ ಸಮಿತಿಯೊಂದಿಗೆ ಸಾರ್ವಜನಿಕರು ಕೂಡಾ ಸಹಕಾರ ನೀಡಬೇಕೆಂದು ಅವರು ಕರೆ ನೀಡಿದ್ದಾರೆ.
ಇದೇ ಬರುವ ಆದಿತ್ಯವಾರ ಮಂಡೆಕೋಲು ಮಸೀದಿಯ ಪರಿಸರದಲ್ಲಿ ನಡೆಯಲಿರುವ ವಿಖಾಯ ತುರ್ತು ಸೇವೆಗಳ ತರಬೇತಿ ಶಿಬಿರದಲ್ಲಿ ಸುಳ್ಯ ಪೊಲೀಸ್ ಠಾಣಾಧಿಕಾರಿ ಕಾನೂನು ಮಾಹಿತಿ ಹಾಗೂ ಮಾದಕ ವಸ್ತುಗಳ ಉಪಯೋಗದಿಂದಾಗುವ ದುಷ್ಪರಿಣಾಮಗಳ ವಿಷಯಗಳ ಬಗ್ಗೆ ಕಾರ್ಯಕರ್ತರಿಗೆ ಮಾಹಿತಿ ನೀಡಲಿದ್ದಾರೆ ಎಂದು ತಾಜುದ್ದೀನ್ ಟರ್ಲಿ ತಿಳಿಸಿದ್ದಾರೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…