ಸುಳ್ಯ: ಮಾದಕ ವಸ್ತುಗಳ ಸೇವನೆ,ದಾಸ್ತಾನು ಮಾರಾಟ,ಮುಂತಾದವುಗಳನ್ನು ಪತ್ತೆಹಚ್ಚಿ ಪೊಲೀಸರಿಗೊಪ್ಪಿಸಲು ಸುಳ್ಯ ವಲಯ SKSSF ವಿಖಾಯ ತಂಡವು ಪಣತೊಟ್ಟಿದೆ.
ಸ್ಥಳೀಯ ಮಟ್ಟದಲ್ಲಿ ವಿಖಾಯ ಸ್ವಯಂ ಸೇವಕರು ಆಯಕಟ್ಟಿನ ಪ್ರದೇಶಗಳಲ್ಲಿ ಈ ಬಗ್ಗೆ ಜಾಗರೂಕರಾಗಿ ನಿಗಾವಹಿಸಲು ಸೂಚಿಸಲಾಗಿದೆ.
ಮಾದಕ ವಸ್ತುಗಳನ್ನು ಉಪಯೋಗಿಸುವುದು ಮಾರಾಟ ಮಾಡುವುದು,ದಾಸ್ತಾನಿರಿಸುವುದು ಗಮನಕ್ಕೆ ಬಂದರೆ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು,ಎಂದು ಸುಳ್ಯ ವಲಯ ವಿಖಾಯ ಕನ್ವೀನರ್ ತಾಜುದ್ದೀನ್ ಟರ್ಲಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಕಾರ್ಯಕರ್ತರು ಭಯಪಡುವ ಅಗತ್ಯವಿಲ್ಲ, ನೀವು ನೀಡುವ ಮಾಹಿತಿಯು ಸಂಪೂರ್ಣ ಗುಪ್ತವಾಗಿರುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದು ಯಾರಿಗಾದರೂ ಕಾರ್ಯಕರ್ತರಿಗೆ ಈ ಬಗ್ಗೆ ಮಾದಕ ವಸ್ತುಗಳ ಬಗ್ಗೆ ಮಾಹಿತಿ ದೊರೆತರೆ ಸುಳ್ಯ ವಲಯ ವಿಖಾಯ ತಂಡಕ್ಕೆ ತಿಸಿದರೆ ವಿಖಾಯ ಸಮಿತಿಯು ಈ ಬಗ್ಗೆ ಇಲಾಖೆಗೆ ದೂರು ನೀಡಳಿರುವುದಾಗಿ ತಿಳಿಸಲಾಗಿದೆ.
ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತೊಡೆದುಹಾಕಲು ವಿಖಾಯ ಸಮಿತಿಯೊಂದಿಗೆ ಸಾರ್ವಜನಿಕರು ಕೂಡಾ ಸಹಕಾರ ನೀಡಬೇಕೆಂದು ಅವರು ಕರೆ ನೀಡಿದ್ದಾರೆ.
ಇದೇ ಬರುವ ಆದಿತ್ಯವಾರ ಮಂಡೆಕೋಲು ಮಸೀದಿಯ ಪರಿಸರದಲ್ಲಿ ನಡೆಯಲಿರುವ ವಿಖಾಯ ತುರ್ತು ಸೇವೆಗಳ ತರಬೇತಿ ಶಿಬಿರದಲ್ಲಿ ಸುಳ್ಯ ಪೊಲೀಸ್ ಠಾಣಾಧಿಕಾರಿ ಕಾನೂನು ಮಾಹಿತಿ ಹಾಗೂ ಮಾದಕ ವಸ್ತುಗಳ ಉಪಯೋಗದಿಂದಾಗುವ ದುಷ್ಪರಿಣಾಮಗಳ ವಿಷಯಗಳ ಬಗ್ಗೆ ಕಾರ್ಯಕರ್ತರಿಗೆ ಮಾಹಿತಿ ನೀಡಲಿದ್ದಾರೆ ಎಂದು ತಾಜುದ್ದೀನ್ ಟರ್ಲಿ ತಿಳಿಸಿದ್ದಾರೆ.
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…