ಸುದ್ದಿಗಳು

ಮಾದಕ ವ್ಯಸನದ ವಿರುದ್ಧದ ಜಾಗೃತಿ ಮನೆಯಿಂದಲೇ ಆರಂಭವಾಗಲಿ- ಜಿಲ್ಲಾ ನ್ಯಾಯಾಧೀಶ ಕಡ್ಲೂರ್ ಸತ್ಯನಾರಾಯಣಾಚಾರ್ಯ ಆಶಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ಪ್ರಸ್ತುತ ಮಾದಕದ್ರವ್ಯ ವ್ಯಸನ ಮಿತಿ ಮೀರಿ ಹರಡುತ್ತಿದ್ದು ಇದರ ಪಿಡುಗನ್ನು ಕಿತ್ತು ಹಾಕಲೇ ಬೇಕು. ಯುವ ಜನತೆಯ ಪಬ್ ಸಂಸ್ಕೃತಿ ದೂರವಾಗಬೇಕು. ಇಲ್ಲದಿದ್ದರೆ ಯುವಶಕ್ತಿಯನ್ನು ಹಾಳು ಮಾಡುವ ಜೊತೆಗೆ ದೇಶವನ್ನೂ ನಾಶ ಮಾಡಿದಂತಾಗುತ್ತದೆ‌. ಆದುದರಿಂದ ಮಾದಕ ವ್ಯಸನದ ವಿರುದ್ದ ಜಾಗೃತಿ ಮನೆಯಿಂದಲೇ ಆರಂಭವಾಗಬೇಕು ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಕಡ್ಲೂರ್ ಸತ್ಯನಾರಾಯಣಾಚಾರ್ಯ ಆಶಯ ವ್ಯಕ್ತಪಡಿಸಿದ್ದಾರೆ.

Advertisement

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ.ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಹಭಾಗಿತ್ವದಲ್ಲಿ ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಮಂಗಳವಾರ ನಡೆದ ಬ್ರ್ಯಾಂಡ್ ಮಂಗಳೂರು ಯೋಜನೆ ಅಂಗವಾಗಿ `ಶಾಲಾ ಕಾಲೇಜುಗಳಲ್ಲಿ ಕೋಮು ಸೌಹಾರ್ದತೆ ಜಾಗೃತಿ ಹಾಗೂ ಮಾದಕ ದ್ರವ್ಯ, ಸೈಬರ್ ಕ್ರೈಂ ವಿರುದ್ಧ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದ ಆಗುಹೋಗುಗಳನ್ನುು ಗುರುತಿಸುವ ಮಾಧ್ಯಮ ರಂಗ, ಸಂವಿಧಾನದ ನಿಜವಾದ ನಾಲ್ಕನೇ ಆಧಾರಸ್ತಂಭವಾಗಿ ಕೆಲಸ ಮಾಡಬೇಕು. ಕೋಮು ಸೌಹಾರ್ದತೆ ಬೆಸೆಯುವಲ್ಲಿ ಮಂಗಳೂರು ಬ್ರ್ಯಾಂಡ್ ಆಗಬೇಕು ಎಂದರು.

ಪ್ರಕೃತಿಯನ್ನು ಆಸ್ವಾದಿಸಿದರೆ ಜೀವನೋಲ್ಲಾಸದ ಕಿಕ್- ಡಾ‌.ಪಿ.ಎಸ್‌.ಹರ್ಷ:

ಮಾದಕ ದ್ರವ್ಯ ಸೇವನೆಯಿಂದ ಕಿಕ್ ಬರುವುದಿಲ್ಲ, ಅದರ ಬದಲು ಪ್ರಕೃತಿಯನ್ನು ಆಸ್ವಾದಿಸಿದರೆ ಜೀವನೋಲ್ಲಾಸದ ಕಿಕ್ ಸಿಗಲು ಸಾಧ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಂವೇದನಾಶೀಲರಾಗಿರಬೇಕು ಎಂದು ನಗರ ಪೊಲೀಸ್ ಕಮಿಷನರ್ ಡಾ‌.ಪಿ.ಎಸ್.ಹರ್ಷ ಹೇಳಿದ್ದಾರೆ.
ಜಾಗೃತಿ ಪೋಸ್ಟರ್’ ಬಿಡುಡೆಗೊಳಿಸಿ ಅವರು ಮಾತನಾಡಿದರು. ಮಾದಕದ್ರವ್ಯಗಳು ನಮ್ಮನ್ನು ವಾಸ್ತವ ಜಗತ್ತಿನಿಂದ ದೂರ ತಳ್ಳುತ್ತವೆ. ಇದರ ಬದಲು ಪ್ರಕೃತಿಯನ್ನು ಆಸ್ವಾದಿಸುವುದನ್ನು ಕಲಿಯಬೇಕು.ಪಶ್ಚಿಮಘಟ್ಟ, ನದಿ, ಕಿನಾರೆಗಳಲ್ಲಿ ಸಿಗುವ ಅಹ್ಲಾದಕರ ವಾತಾವರಣ ಬೇರೆಲ್ಲೂ ಸಿಗಲು ಸಾಧ್ಯವಿಲ್ಲ. ಮಾದಕದ್ರವ್ಯ ದಂಧೆಕೋರರು ಹಣಕ್ಕಾಗಿ ಇಂತಹ ಕೃತ್ಯಗಳಿಗೆ ಅಮಾಯಕ ಯುವಜನತೆಯನ್ನು ಬಲಿ ಪಡೆಯುತ್ತಿದ್ದಾರೆ. ಇದರಿಂದ ಸಿಗುವ ಮೊತ್ತವನ್ನು ಹವಾಲ, ಉಗ್ರ ಚಟುವಟಿಕೆಗೆ ಮುಂತಾದ ಕೃತ್ಯಗಳಿಗೆ ಬಳಕೆ ಮಾಡುತ್ತಾರೆ. ಆದ್ದರಿಂದ ಯುವ ಜನತೆ ಇಂತಹ ಪ್ರಲೋಭನೆಗೆ ಒಳಗಾಗಬಾರದು ಎಂದು ಅವರು ಕಿವಿ ಮಾತು ಹೇಳಿದರು.

ಸೈಬರ್ ಅಪರಾಧ ಎಚ್ಚರಿಕೆ:
ಪ್ರಸಕ್ತ ಯುವಜನತೆಗೆ ಮನೆ ಮಂದಿ, ಸ್ನೇಹಿತರಿಗಿಂತ ಮೊಬೈಲ್ ಜೊತೆಗಾರ ಎನಿಸಿಬಿಟ್ಟಿದೆ. ಮೊಬೈಲ್‍ನಲ್ಲಿ ಆಟವಾಡುವುದನ್ನೇ ಶ್ರೇಷ್ಠ ಎಂದು ಭಾವಿಸಿರುವ
ಯುವಜನತೆ ಸೈಬರ್ ಅಪರಾಧಗಳಲ್ಲಿ ತೊಡಗಿಕೊಳ್ಳುತ್ತದೆ. ಅಂತರ್ಜಾಲ ಎನ್ನುವುದು ತಳ ಇಲ್ಲದ ಬಾವಿಯಾಗಿದ್ದು, ಯುವಜನತೆ ಆನ್‍ಲೈನ್ ಮನೋವಿಕೃತಿಗೆ ಬಲಿಪಶುವಾಗುತ್ತಿದ್ದಾರೆ. ಜಾತಿ, ಕೋಮುವಾದದಿಂದ ದೂರವಾಗಿ, ಉತ್ತಮ ಭಾರತೀಯರಾಗಿ ರೂಪುಗೊಳ್ಳಬೇಕು. ಜವಾಬ್ದಾರಿಯುವ ಪ್ರಜೆಗಳಾಗಿ ಬಾಳಬೇಕು ಎಂದು ಅವರು ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶ ಗಂಗಾಧರ್, ಕೆನರಾ ಕಾಲೇಜು ಆಡಳಿತ ಮಂಡಳಿ ಗೌರವ ಕಾರ್ಯದರ್ಶಿ ರಂಗನಾಥ ಭಟ್, ಕೆನರಾ ಕಾಲೇಜು ಪ್ರಾಂಶುಪಾಲೆ ಡಾ.ಕೆ.ವಿ.ಮಾಲಿನಿ ಉಪಸ್ಥಿತರಿದ್ದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿ, ಪ್ತಸ್ತಾವನೆಗೈದರು. ಉಪಾಧ್ಯಕ್ಷ ಪುಷ್ಪರಾಜ್ ಪ್ರತಿಜ್ಞೆ ಬೋಧಿಸಿದರು. ಭಾಸ್ಕರ ರೈ ಕಟ್ಟ ವಂದಿಸಿದರು. ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಕಾರ್ಯಕ್ರ‌ಮ ನಿರೂಪಿಸಿದರು.

 

ರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…

4 hours ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

19 hours ago

“ದ ಹಿಂದೂ ಮ್ಯಾನಿಫ್ಯಾಸ್ಟೋ” ಕೃತಿ ಬಿಡುಗಡೆ | ಅಹಿಂಸೆಯೇ ಭಾರತದ ನೈಜ ಧರ್ಮ-ಮೋಹನ್ ಭಾಗವತ್

ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…

19 hours ago

ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರ ದಾಳಿ ಹಿನ್ನೆಲೆ | ಭಾರತದಲ್ಲಿ ಪಾಕ್ ಸರ್ಕಾರದ ಸಾಮಾಜಿಕ ಜಾಲತಾಣ ನಿಷೇಧ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…

19 hours ago

ರಾಜ್ಯದಲ್ಲಿ ಒಂದು ವಾರ ಗುಡುಗು ಸಹಿತ ಮಳೆ ಸಾಧ್ಯತೆ | 19 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…

19 hours ago