Advertisement
Exclusive - Mirror Hunt

ಮಾದರಿಯಾಯ್ತು ಪುಣ್ಚಪ್ಪಾಡಿ ಸರಕಾರಿ ಶಾಲೆಯಲ್ಲಿ ದೀಪಾವಳಿ ಸಂಭ್ರಮ……

Share

ಸವಣೂರು: ಈ ಸರಕಾರಿ ಶಾಲೆ ಯಾವತ್ತೂ ಗಮನ ಸಳೆಯುತ್ತದೆ. ವಿವಿಧ ಕಾರ್ಯಕ್ರಮಗಳ ಮೂಲಕ ಸಮಾಜವನ್ನು  ಸೆಳೆಯುತ್ತದೆ. ಶಾಲೆಗೆ ಪೋಷಕರು ಮಾತ್ರವಲ್ಲ ಊರಿನ ಮಂದಿಯೂ ಬರುವಂತೆ ಮಾಡುತ್ತದೆ. ಈ ಬಾರಿಯ ದೀಪಾವಳಿಯೂ ಅದೇ ಮಾದರಿಯಲ್ಲಿ  ನಡೆಯಿತು. ಇದು ದೀಪದೃಶ್ಯ.

ಆ ಮುಸ್ಸಂಜೆಯ ಹೊತ್ತಲ್ಲಿ ನೂರಾರು ಮಕ್ಕಳ ಸಂಭ್ರಮದ ಓಡಾಟ…! ಹಾರಾಡುತ್ತಿದ್ದ ಹತ್ತಾರು ಗೂಡು ದೀಪಗಳು…. ಇದರ ನಡುವೆಯೇ ಪರ್ವತದಾಕಾರದ ಏರುತಗ್ಗು ಗಳಲ್ಲಿ ಝಗಮಗಿಸುತ್ತಿದ್ದ ಸಹಸ್ರಸಂಖ್ಯೆಯ ಹಣತೆಗಳು…! ಈ ಹಣತೆಗಳ ಹಂದರದಲ್ಲಿ ನಲಿದಾಡುತ್ತಿದ್ದ ನೂರಾರು ಮಕ್ಕಳು….ಪೋಷಕರು..! . ಇದು ಇಡೀ ಕಾರ್ಯಕ್ರಮದ ಸ್ಥೂಲ ರೂಪವಷ್ಟೇ. ಇಷ್ಟು ಮಾತ್ರವಲ್ಲ  ಮತ್ತೊಂದು ಕಡೆಯಿಂದ ಚೆಂಡೆ, ಮದ್ದಳೆ,ಭಾಗವತಿಕೆಯ ಅಬ್ಬರ…! ಅರ್ಥಗಾರಿಕೆಯ ವ್ಯಾಖ್ಯಾನ. ಇದೆಲ್ಲಾ ಸರಕಾರಿ ಶಾಲೆಯಲ್ಲಿ  ಮಾಡಬಹುದಾ ಅಂತ ಅಚ್ಚರಿ ಪಡಬೇಡಿ. ಇದು ನಡೆದಿದೆ. ಬಹುಶ: ಎಲ್ಲಾ ಶಾಲೆಗಳಿಗೂ ಇದು ಮಾದರಿ. ಇಂತಹದ್ದು ನಡೆದದ್ದು ಪುತ್ತೂರು ತಾಲೂಕಿನ ಗ್ರಾಮೀಣ ಪ್ರದೇಶದ ಶಾಲೆಯಲ್ಲಿ. ಸವಣೂರು ಬಳಿಯ ಪುಣ್ಚಪ್ಪಾಡಿ ಸರಕಾರಿ ಶಾಲೆಯಲ್ಲಿ.

ಶಾಲೆಯ ಮಕ್ಕಳ ದೀಪಾವಳಿ ಸಂಭ್ರಮದ ಹೆಸರು  ದೀಪದೃಶ್ಯ . ಕಾರ್ಯಕ್ರಮದಲ್ಲಿ  ಸವಣೂರು ಗ್ರಾಮಪಂಚಾಯತ್ಅ ಧ್ಯಕ್ಷರಾದ ಇಂದಿರಾ ಬಿಕೆ, ತಾಲೂಕು ಪಂಚಾಯತ್  ಸದಸ್ಯೆ ರಾಜೇಶ್ವರಿ, ಗ್ರಾಮ ಪಂಚಾಯತ್ ಸದಸ್ ನಾಗೇಶ್ಓಡಂತರ್ಯ, ಹಿರಿಯರಾದ ಗಂಗಾಧರ ರೈ, ಯುವಸನ್ಮಾನ ಪ್ರಶಸ್ತಿಪುರಸ್ಕೃತರಾದ ಸುರೇಶ್  ಸೂಡಿಮುಳ್ಳು, ಮುಂತಾದ ಗಣ್ಯರು ಮಕ್ಕಳ ಜೊತೆ ಸಂಭ್ರಮಿಸಿದರು.

ಕಾರ್ಯಕ್ರಮದಲ್ಲಿ ವಿಷ್ಣು ಭಟ್ ದೀಪವನ್ನು ಪ್ರಜ್ವಲಿಸಿದರು. ದೀಪ ಚಿಂತನವನ್ನು ಮಾಡಿದ ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರು ಇಲ್ಲಿಯ ಮುಖ್ಯಗುರುಗಳಾದ ಗಿರಿಶಂಕರ ಸುಲಾಯ ಮಾತನಾಡಿ ದೀಪಾವಳಿ ಕೇವಲ ಒಂದು ಧಾರ್ಮಿಕತೆಯ ಹಬ್ಬ ಮಾತ್ರವಲ್ಲ ಅದು ಪ್ರಾಕೃತಿಕವೂ ಸಾರ್ವತ್ರಿಕವೂ ಆದಹಬ್ಬ. ಇದಕ್ಕೆ ಸದ್ಭಾವನೆಯ ಹಾಗೂ ವೈಜ್ಞಾನಿಕತೆಯ ಹಂದರವಿದೆ  ದೀಪಭಾವ ಹಾಗೂ ದೀಪ ನೀಡುವ ಸಾದೃಶ್ಯ ಸಂಕೇತಗಳು ಮನುಜಜೀವಕ್ಕೆ ಬೇಕಾದ ಅತಿಮುಖ್ಯವಾದ ಸಂಗತಿಗಳಾಗಿವೆ. ತಾನು ಉರಿಯದೆ ಬೆಳಗಲು ಸಾಧ್ಯವಿಲ್ಲ ಎಂಬ ಸಂದೇಶವನ್ನುನೀಡುವ ದೀಪದಂತಾಗೋಣ ಎಂದರು.

ಕಾರ್ಯಕ್ರಮದಲ್ಲಿ  ಶ್ರವಣ ರಂಗ ಸವಣೂರು ಇದರ ಸಾರಥ್ಯದಲ್ಲಿ ಕಲಾವಿದರಾದ ತಾರಾನಾಥ ಸವಣೂರು ಇವರ ಸಂಯೋಜನೆಯಲ್ಲಿ ನಡೆದ ನರಕಚತುರ್ದಶಿಯ ಮಹತ್ವವನ್ನು ಸಾರುವ ಈ ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದರಾದ ನಾ.ಕಾರಂತ ಪೆರಾಜೆ, ಗುಡ್ಡಪ್ಪಬಲ್ಯ, ರಮೇಶ್ ಉಳಯ, ಪ್ರಸಾದ್ಆರೆಲ್ತಡಿ ಮುಮ್ಮೇಳದಲ್ಲಿ ಭಾಗವಹಿಸಿದರೆ ಯುವಭಾಗವತರಾದ ಆನಂದ ಇಡ್ಯಾಡಿ , ಬಾಲಕೃಷ್ಣ ಬೊಮ್ಮಾರು ಇವರು ಹಿಮ್ಮೇಳದಲ್ಲಿ ಭಾಗವಹಿಸಿದರು. ನೂರಾರು ಪೋಷಕರ ಮಧ್ಯದಲ್ಲಿ ಶಾಲಾ ಮಕ್ಕಳು ಸಹಸ್ರಾರು ದೀಪಗಳು ಹತ್ತಾರು ಗೂಡುದೀಪಗಳು ಚಿಂತನೆಯ ಮೂಲಕ ದೀಪಾವಳಿಯ ಮಹತ್ವ ಸಹಸೇವನೆಯ ಸಿಹಿ..!

ಶಾಲಾಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಉಮಾಶಂಕರ ಗೌಡ ಹಾಗೂ ಮುಖ್ಯಗುರು ರಶ್ಮಿತಾ ನರಿಮೊಗರು ಇವರ ನೇತೃತ್ವದಲ್ಲಿ ಮೂಡಿಬಂದ ಈ ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆ ಸವಣೂರು ವಲಯ ಇದರ ಅಧ್ಯಕ್ಷರಾದ ಮಹೇಶ್ ಕೆ ಸವಣೂರು, ಸವಣೂರು ಯುವಕ ಮಂಡಲ ಮಾಜಿ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅನಿತ್ ಕುಮಾರ್, ಶಿಕ್ಷಕರಾದ ಸುಜಯಾ, ವಸಂತಿಕೆ, ಗೀತಾ ದೇವರಮನೆ, ಅಂಗನವಾಡಿ ಕಾರ್ಯಕರ್ತೆ ಸೇಸಮ್ಮ, ಎಸ್.ಡಿ.ಎಮ್.ಸಿ.ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು,ಊರವರು ಸಾಕ್ಷಿಗಳಾದರು.  ಯುವಚೇತನ ಸೇವಾಸಂಘ ಪುಣ್ಚಪ್ಪಾಡಿ, ಜನಜಾಗೃತಿವೇದಿಕೆ ಸವಣೂರು ವಲಯ,  ರಾಜ್ಯಪ್ರ ಶಸ್ತಿಪುರಸ್ಕೃತ ಯುವಕಮಂಡಲ ಸವಣೂರು ಸಹಕರಿಸಿದರು.

ಶಾಲೆಯೊಂದರಲ್ಲಿ ಸಾಮೂಹಿಕ ದೀಪಾವಳಿ ಆಚರಿಸುವ ಸಂಭ್ರಮವನ್ನು  ಆರಂಭಿಸಿದ್ದೇವೆ .ಈ ವರ್ಷ ಯಕ್ಷಗಾನ ತಾಳಮದ್ದಳೆಯ ವೈಭವವನ್ನುಸೇರಿಸಿದ್ದೇವೆ ಹತ್ತಾರು ಜನರನ್ನು ಸೇರಿಸುವ ಈ ಸಂಭ್ರಮ ಖುಷಿ ಎನಿಸಿದೆ.- ಗಂಗಾಧರ ರೈ, ದೇವಸ್ಯ

ನಾನು ನೋಡಿದ ಅತ್ಯಪೂರ್ವ ಕಾರ್ಯಕ್ರಮಗಳಲ್ಲಿ ಈ ಕಾರ್ಯಕ್ರಮವು ಒಂದು. ಸಂಸ್ಕಾರ ಎನ್ನುವುದು ಹೇಳಿಕೊಳ್ಳುವುದಿಲ್ಲ ಮಾಡಿತೋರಿಸುವುದು ಎಂಬುದನ್ನು ಇಲ್ಲಿ ತೋರಿಸಿದ್ದಾರೆ. ಈ ವಿಶಿಷ್ಟ ದೀಪಾವಳಿಯ ಮೂಲಕ ಮಾಡಿ ತೋರಿಸಿದ್ದಾರೆ. – ನಾ.ಕಾರಂತ ಪೆರಾಜೆ , ಪತ್ರಕರ್ತರು, ಹಿರಿಯ ಯಕ್ಷಗಾನ ಕಲಾವಿದರು  

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago