ಸುದ್ದಿಗಳು

ಮಾದರಿಯಾಯ್ತು ಶ್ರೀ ಭಗವಾನ್ ಸಂಘದ ಕಾರ್ಯ: “ಸೇವೆ” ಮುಂದೆ ಬಂದಾಗ ಉಳಿದೆಲ್ಲವೂ ದೂರವಾಯ್ತು ಇಲ್ಲಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅರಂತೋಡು: ಮಡಿಕೇರಿ ತಾಲೂಕು ಚೆಂಬುಗ್ರಾಮದ ಊರುಬೈಲು ನಿವಾಸಿ ಹರಿಜನ ಗುರುವ ಅವರ ಪತ್ನಿ 65 ವರ್ಷ ವಯಸ್ಸಿನ ಬೆಳ್ಳಚ್ಚಿ  ಗುರುವಾರ ರಾತ್ರಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದರು. ಮರುದಿನ ಬೆಳಿಗ್ಗೆ 10 ಗಂಟೆಯಾದರೂ ಮೃತರ ಕುಟುಂಬದವರಾಗಲೀ,ಬಂಧುಗಳಾಗಲಿ ಯಾರೂ ಕೂಡ ಅಂತ್ಯಸಂಸ್ಕಾರ ಕಾರ್ಯಗಳಿಗೆ ಸ್ಪಂದಿಸದೆ ಪಾರ್ಥಿವ ಶರೀರ ಅನಾಥವಾಗಿ ಉಳಿಯಿತು.

Advertisement
Advertisement

ಈ ಪರಿಸ್ಥಿತಿ ಮನಗಂಡ ಪಯಸ್ವಿನಿ ಕೃ ಪ ಸ ಸಂಘದ ಅಧ್ಯಕ್ಷರಾದ  ಅನಂತ್.ಯನ್.ಸಿ ಅವರು ತಮ್ಮ ಸಮಾಜ ಸೇವಾ ಸಂಘಟನೆಯಾದ ಶ್ರೀ ಭಗವಾನ್ ಸಂಘದ ಸ್ವಯಂಸೇವಕರು ಮತ್ತು ಕೆಲವು ಯುವಕರನ್ನು ಸೇರಿಸಿಕೊಂಡು ಅಂತ್ಯಸಂಸ್ಕಾರ ಕೈಗೊಳ್ಳಲು ನಿರ್ಧರಿಸಿದರು.

ಮಳೆಯನ್ನು ಲೆಕ್ಕಿಸದೆ, ಸಂಘದ ವೆಚ್ಚದಲ್ಲೇ ಸಕಲ ಸಿದ್ದತೆಗಳನ್ನು ಮಾಡಿಕೊಂಡು ಅಂತ್ಯಸಂಸ್ಕಾರ ಮಾಡಿದ್ದಲ್ಲದೆ,ಜಾತಿಭೇದವಿಲ್ಲದೆ,ಸ್ವತಃ ನಿರ್ಗತಿಕ ವೃದ್ದೆ ದಲಿತ ಮಹಿಳೆಯ ಶವಯಾತ್ರೆಗೆ ಹೆಗಲು ಕೊಟ್ಟು ಮಾನವೀಯತೆ ಮೆರೆದರು. ನೊಂದವರಿಗೆ ನೆರವಾಗುವ ಹೃದಯ ವೈಶಾಲತೆ ಮೆರೆದ ಸಂಘದ ಸದಸ್ಯರು ಜನರ ಮೆಚ್ಚುಗೆಗೆ ಪಾತ್ರರಾದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

3 hours ago

41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ

ಬಹುನಿರೀಕ್ಷಿತ ಆಕ್ಸಿಯಮ್​ ಮಿಷನ್​-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…

7 hours ago

ದೇಶದ ಬಡತನ ಪ್ರಮಾಣ ಗಣನೀಯ ಇಳಿಕೆ

ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…

10 hours ago

ರೈತರು ನ್ಯಾನೋ ಯೂರಿಯಾ ಬಳಸುವಂತೆ ಕೃಷಿ ಇಲಾಖೆ ಸಲಹೆ

ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ…

10 hours ago

ಮಾವಿನ ಬೆಳೆಗೆ ಬೆಂಬಲ ಬೆಲೆ ಘೋಷಣೆ

ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ…

10 hours ago

ಹವಾಮಾನ ವರದಿ | 25-06-2025 | ಜೂ.29 ರ ನಂತರ ಹೇಗಿರಲಿದೆ ಹವಾಮಾನ..? | ಜು.4 ರಿಂದ ಮತ್ತೆ ಮಳೆ ಚುರುಕಾಗುತ್ತದೆಯೇ..?

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ…

11 hours ago