ಅರಂತೋಡು: ಮಡಿಕೇರಿ ತಾಲೂಕು ಚೆಂಬುಗ್ರಾಮದ ಊರುಬೈಲು ನಿವಾಸಿ ಹರಿಜನ ಗುರುವ ಅವರ ಪತ್ನಿ 65 ವರ್ಷ ವಯಸ್ಸಿನ ಬೆಳ್ಳಚ್ಚಿ ಗುರುವಾರ ರಾತ್ರಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದರು. ಮರುದಿನ ಬೆಳಿಗ್ಗೆ 10 ಗಂಟೆಯಾದರೂ ಮೃತರ ಕುಟುಂಬದವರಾಗಲೀ,ಬಂಧುಗಳಾಗಲಿ ಯಾರೂ ಕೂಡ ಅಂತ್ಯಸಂಸ್ಕಾರ ಕಾರ್ಯಗಳಿಗೆ ಸ್ಪಂದಿಸದೆ ಪಾರ್ಥಿವ ಶರೀರ ಅನಾಥವಾಗಿ ಉಳಿಯಿತು.
ಈ ಪರಿಸ್ಥಿತಿ ಮನಗಂಡ ಪಯಸ್ವಿನಿ ಕೃ ಪ ಸ ಸಂಘದ ಅಧ್ಯಕ್ಷರಾದ ಅನಂತ್.ಯನ್.ಸಿ ಅವರು ತಮ್ಮ ಸಮಾಜ ಸೇವಾ ಸಂಘಟನೆಯಾದ ಶ್ರೀ ಭಗವಾನ್ ಸಂಘದ ಸ್ವಯಂಸೇವಕರು ಮತ್ತು ಕೆಲವು ಯುವಕರನ್ನು ಸೇರಿಸಿಕೊಂಡು ಅಂತ್ಯಸಂಸ್ಕಾರ ಕೈಗೊಳ್ಳಲು ನಿರ್ಧರಿಸಿದರು.
ಮಳೆಯನ್ನು ಲೆಕ್ಕಿಸದೆ, ಸಂಘದ ವೆಚ್ಚದಲ್ಲೇ ಸಕಲ ಸಿದ್ದತೆಗಳನ್ನು ಮಾಡಿಕೊಂಡು ಅಂತ್ಯಸಂಸ್ಕಾರ ಮಾಡಿದ್ದಲ್ಲದೆ,ಜಾತಿಭೇದವಿಲ್ಲದೆ,ಸ್ವತಃ ನಿರ್ಗತಿಕ ವೃದ್ದೆ ದಲಿತ ಮಹಿಳೆಯ ಶವಯಾತ್ರೆಗೆ ಹೆಗಲು ಕೊಟ್ಟು ಮಾನವೀಯತೆ ಮೆರೆದರು. ನೊಂದವರಿಗೆ ನೆರವಾಗುವ ಹೃದಯ ವೈಶಾಲತೆ ಮೆರೆದ ಸಂಘದ ಸದಸ್ಯರು ಜನರ ಮೆಚ್ಚುಗೆಗೆ ಪಾತ್ರರಾದರು.
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…
ಬಹುನಿರೀಕ್ಷಿತ ಆಕ್ಸಿಯಮ್ ಮಿಷನ್-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…
ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…
ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ…
ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ…