ಅರಂತೋಡು: ಮಡಿಕೇರಿ ತಾಲೂಕು ಚೆಂಬುಗ್ರಾಮದ ಊರುಬೈಲು ನಿವಾಸಿ ಹರಿಜನ ಗುರುವ ಅವರ ಪತ್ನಿ 65 ವರ್ಷ ವಯಸ್ಸಿನ ಬೆಳ್ಳಚ್ಚಿ ಗುರುವಾರ ರಾತ್ರಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದರು. ಮರುದಿನ ಬೆಳಿಗ್ಗೆ 10 ಗಂಟೆಯಾದರೂ ಮೃತರ ಕುಟುಂಬದವರಾಗಲೀ,ಬಂಧುಗಳಾಗಲಿ ಯಾರೂ ಕೂಡ ಅಂತ್ಯಸಂಸ್ಕಾರ ಕಾರ್ಯಗಳಿಗೆ ಸ್ಪಂದಿಸದೆ ಪಾರ್ಥಿವ ಶರೀರ ಅನಾಥವಾಗಿ ಉಳಿಯಿತು.
ಈ ಪರಿಸ್ಥಿತಿ ಮನಗಂಡ ಪಯಸ್ವಿನಿ ಕೃ ಪ ಸ ಸಂಘದ ಅಧ್ಯಕ್ಷರಾದ ಅನಂತ್.ಯನ್.ಸಿ ಅವರು ತಮ್ಮ ಸಮಾಜ ಸೇವಾ ಸಂಘಟನೆಯಾದ ಶ್ರೀ ಭಗವಾನ್ ಸಂಘದ ಸ್ವಯಂಸೇವಕರು ಮತ್ತು ಕೆಲವು ಯುವಕರನ್ನು ಸೇರಿಸಿಕೊಂಡು ಅಂತ್ಯಸಂಸ್ಕಾರ ಕೈಗೊಳ್ಳಲು ನಿರ್ಧರಿಸಿದರು.
ಮಳೆಯನ್ನು ಲೆಕ್ಕಿಸದೆ, ಸಂಘದ ವೆಚ್ಚದಲ್ಲೇ ಸಕಲ ಸಿದ್ದತೆಗಳನ್ನು ಮಾಡಿಕೊಂಡು ಅಂತ್ಯಸಂಸ್ಕಾರ ಮಾಡಿದ್ದಲ್ಲದೆ,ಜಾತಿಭೇದವಿಲ್ಲದೆ,ಸ್ವತಃ ನಿರ್ಗತಿಕ ವೃದ್ದೆ ದಲಿತ ಮಹಿಳೆಯ ಶವಯಾತ್ರೆಗೆ ಹೆಗಲು ಕೊಟ್ಟು ಮಾನವೀಯತೆ ಮೆರೆದರು. ನೊಂದವರಿಗೆ ನೆರವಾಗುವ ಹೃದಯ ವೈಶಾಲತೆ ಮೆರೆದ ಸಂಘದ ಸದಸ್ಯರು ಜನರ ಮೆಚ್ಚುಗೆಗೆ ಪಾತ್ರರಾದರು.
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…
ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…