ಅರಂತೋಡು: ಮಡಿಕೇರಿ ತಾಲೂಕು ಚೆಂಬುಗ್ರಾಮದ ಊರುಬೈಲು ನಿವಾಸಿ ಹರಿಜನ ಗುರುವ ಅವರ ಪತ್ನಿ 65 ವರ್ಷ ವಯಸ್ಸಿನ ಬೆಳ್ಳಚ್ಚಿ ಗುರುವಾರ ರಾತ್ರಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದರು. ಮರುದಿನ ಬೆಳಿಗ್ಗೆ 10 ಗಂಟೆಯಾದರೂ ಮೃತರ ಕುಟುಂಬದವರಾಗಲೀ,ಬಂಧುಗಳಾಗಲಿ ಯಾರೂ ಕೂಡ ಅಂತ್ಯಸಂಸ್ಕಾರ ಕಾರ್ಯಗಳಿಗೆ ಸ್ಪಂದಿಸದೆ ಪಾರ್ಥಿವ ಶರೀರ ಅನಾಥವಾಗಿ ಉಳಿಯಿತು.
ಈ ಪರಿಸ್ಥಿತಿ ಮನಗಂಡ ಪಯಸ್ವಿನಿ ಕೃ ಪ ಸ ಸಂಘದ ಅಧ್ಯಕ್ಷರಾದ ಅನಂತ್.ಯನ್.ಸಿ ಅವರು ತಮ್ಮ ಸಮಾಜ ಸೇವಾ ಸಂಘಟನೆಯಾದ ಶ್ರೀ ಭಗವಾನ್ ಸಂಘದ ಸ್ವಯಂಸೇವಕರು ಮತ್ತು ಕೆಲವು ಯುವಕರನ್ನು ಸೇರಿಸಿಕೊಂಡು ಅಂತ್ಯಸಂಸ್ಕಾರ ಕೈಗೊಳ್ಳಲು ನಿರ್ಧರಿಸಿದರು.
ಮಳೆಯನ್ನು ಲೆಕ್ಕಿಸದೆ, ಸಂಘದ ವೆಚ್ಚದಲ್ಲೇ ಸಕಲ ಸಿದ್ದತೆಗಳನ್ನು ಮಾಡಿಕೊಂಡು ಅಂತ್ಯಸಂಸ್ಕಾರ ಮಾಡಿದ್ದಲ್ಲದೆ,ಜಾತಿಭೇದವಿಲ್ಲದೆ,ಸ್ವತಃ ನಿರ್ಗತಿಕ ವೃದ್ದೆ ದಲಿತ ಮಹಿಳೆಯ ಶವಯಾತ್ರೆಗೆ ಹೆಗಲು ಕೊಟ್ಟು ಮಾನವೀಯತೆ ಮೆರೆದರು. ನೊಂದವರಿಗೆ ನೆರವಾಗುವ ಹೃದಯ ವೈಶಾಲತೆ ಮೆರೆದ ಸಂಘದ ಸದಸ್ಯರು ಜನರ ಮೆಚ್ಚುಗೆಗೆ ಪಾತ್ರರಾದರು.
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…