Advertisement
ಸುದ್ದಿಗಳು

ಮಾದರಿಯಾಯ್ತು ಶ್ರೀ ಭಗವಾನ್ ಸಂಘದ ಕಾರ್ಯ: “ಸೇವೆ” ಮುಂದೆ ಬಂದಾಗ ಉಳಿದೆಲ್ಲವೂ ದೂರವಾಯ್ತು ಇಲ್ಲಿ

Share

ಅರಂತೋಡು: ಮಡಿಕೇರಿ ತಾಲೂಕು ಚೆಂಬುಗ್ರಾಮದ ಊರುಬೈಲು ನಿವಾಸಿ ಹರಿಜನ ಗುರುವ ಅವರ ಪತ್ನಿ 65 ವರ್ಷ ವಯಸ್ಸಿನ ಬೆಳ್ಳಚ್ಚಿ  ಗುರುವಾರ ರಾತ್ರಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದರು. ಮರುದಿನ ಬೆಳಿಗ್ಗೆ 10 ಗಂಟೆಯಾದರೂ ಮೃತರ ಕುಟುಂಬದವರಾಗಲೀ,ಬಂಧುಗಳಾಗಲಿ ಯಾರೂ ಕೂಡ ಅಂತ್ಯಸಂಸ್ಕಾರ ಕಾರ್ಯಗಳಿಗೆ ಸ್ಪಂದಿಸದೆ ಪಾರ್ಥಿವ ಶರೀರ ಅನಾಥವಾಗಿ ಉಳಿಯಿತು.

ಈ ಪರಿಸ್ಥಿತಿ ಮನಗಂಡ ಪಯಸ್ವಿನಿ ಕೃ ಪ ಸ ಸಂಘದ ಅಧ್ಯಕ್ಷರಾದ  ಅನಂತ್.ಯನ್.ಸಿ ಅವರು ತಮ್ಮ ಸಮಾಜ ಸೇವಾ ಸಂಘಟನೆಯಾದ ಶ್ರೀ ಭಗವಾನ್ ಸಂಘದ ಸ್ವಯಂಸೇವಕರು ಮತ್ತು ಕೆಲವು ಯುವಕರನ್ನು ಸೇರಿಸಿಕೊಂಡು ಅಂತ್ಯಸಂಸ್ಕಾರ ಕೈಗೊಳ್ಳಲು ನಿರ್ಧರಿಸಿದರು.

ಮಳೆಯನ್ನು ಲೆಕ್ಕಿಸದೆ, ಸಂಘದ ವೆಚ್ಚದಲ್ಲೇ ಸಕಲ ಸಿದ್ದತೆಗಳನ್ನು ಮಾಡಿಕೊಂಡು ಅಂತ್ಯಸಂಸ್ಕಾರ ಮಾಡಿದ್ದಲ್ಲದೆ,ಜಾತಿಭೇದವಿಲ್ಲದೆ,ಸ್ವತಃ ನಿರ್ಗತಿಕ ವೃದ್ದೆ ದಲಿತ ಮಹಿಳೆಯ ಶವಯಾತ್ರೆಗೆ ಹೆಗಲು ಕೊಟ್ಟು ಮಾನವೀಯತೆ ಮೆರೆದರು. ನೊಂದವರಿಗೆ ನೆರವಾಗುವ ಹೃದಯ ವೈಶಾಲತೆ ಮೆರೆದ ಸಂಘದ ಸದಸ್ಯರು ಜನರ ಮೆಚ್ಚುಗೆಗೆ ಪಾತ್ರರಾದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

45 minutes ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

1 hour ago

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

5 days ago