ಅರಂತೋಡು: ಮಡಿಕೇರಿ ತಾಲೂಕು ಚೆಂಬುಗ್ರಾಮದ ಊರುಬೈಲು ನಿವಾಸಿ ಹರಿಜನ ಗುರುವ ಅವರ ಪತ್ನಿ 65 ವರ್ಷ ವಯಸ್ಸಿನ ಬೆಳ್ಳಚ್ಚಿ ಗುರುವಾರ ರಾತ್ರಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದರು. ಮರುದಿನ ಬೆಳಿಗ್ಗೆ 10 ಗಂಟೆಯಾದರೂ ಮೃತರ ಕುಟುಂಬದವರಾಗಲೀ,ಬಂಧುಗಳಾಗಲಿ ಯಾರೂ ಕೂಡ ಅಂತ್ಯಸಂಸ್ಕಾರ ಕಾರ್ಯಗಳಿಗೆ ಸ್ಪಂದಿಸದೆ ಪಾರ್ಥಿವ ಶರೀರ ಅನಾಥವಾಗಿ ಉಳಿಯಿತು.
ಈ ಪರಿಸ್ಥಿತಿ ಮನಗಂಡ ಪಯಸ್ವಿನಿ ಕೃ ಪ ಸ ಸಂಘದ ಅಧ್ಯಕ್ಷರಾದ ಅನಂತ್.ಯನ್.ಸಿ ಅವರು ತಮ್ಮ ಸಮಾಜ ಸೇವಾ ಸಂಘಟನೆಯಾದ ಶ್ರೀ ಭಗವಾನ್ ಸಂಘದ ಸ್ವಯಂಸೇವಕರು ಮತ್ತು ಕೆಲವು ಯುವಕರನ್ನು ಸೇರಿಸಿಕೊಂಡು ಅಂತ್ಯಸಂಸ್ಕಾರ ಕೈಗೊಳ್ಳಲು ನಿರ್ಧರಿಸಿದರು.
ಮಳೆಯನ್ನು ಲೆಕ್ಕಿಸದೆ, ಸಂಘದ ವೆಚ್ಚದಲ್ಲೇ ಸಕಲ ಸಿದ್ದತೆಗಳನ್ನು ಮಾಡಿಕೊಂಡು ಅಂತ್ಯಸಂಸ್ಕಾರ ಮಾಡಿದ್ದಲ್ಲದೆ,ಜಾತಿಭೇದವಿಲ್ಲದೆ,ಸ್ವತಃ ನಿರ್ಗತಿಕ ವೃದ್ದೆ ದಲಿತ ಮಹಿಳೆಯ ಶವಯಾತ್ರೆಗೆ ಹೆಗಲು ಕೊಟ್ಟು ಮಾನವೀಯತೆ ಮೆರೆದರು. ನೊಂದವರಿಗೆ ನೆರವಾಗುವ ಹೃದಯ ವೈಶಾಲತೆ ಮೆರೆದ ಸಂಘದ ಸದಸ್ಯರು ಜನರ ಮೆಚ್ಚುಗೆಗೆ ಪಾತ್ರರಾದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…