ಅರಂತೋಡು: ಮಡಿಕೇರಿ ತಾಲೂಕು ಚೆಂಬುಗ್ರಾಮದ ಊರುಬೈಲು ನಿವಾಸಿ ಹರಿಜನ ಗುರುವ ಅವರ ಪತ್ನಿ 65 ವರ್ಷ ವಯಸ್ಸಿನ ಬೆಳ್ಳಚ್ಚಿ ಗುರುವಾರ ರಾತ್ರಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದರು. ಮರುದಿನ ಬೆಳಿಗ್ಗೆ 10 ಗಂಟೆಯಾದರೂ ಮೃತರ ಕುಟುಂಬದವರಾಗಲೀ,ಬಂಧುಗಳಾಗಲಿ ಯಾರೂ ಕೂಡ ಅಂತ್ಯಸಂಸ್ಕಾರ ಕಾರ್ಯಗಳಿಗೆ ಸ್ಪಂದಿಸದೆ ಪಾರ್ಥಿವ ಶರೀರ ಅನಾಥವಾಗಿ ಉಳಿಯಿತು.
ಈ ಪರಿಸ್ಥಿತಿ ಮನಗಂಡ ಪಯಸ್ವಿನಿ ಕೃ ಪ ಸ ಸಂಘದ ಅಧ್ಯಕ್ಷರಾದ ಅನಂತ್.ಯನ್.ಸಿ ಅವರು ತಮ್ಮ ಸಮಾಜ ಸೇವಾ ಸಂಘಟನೆಯಾದ ಶ್ರೀ ಭಗವಾನ್ ಸಂಘದ ಸ್ವಯಂಸೇವಕರು ಮತ್ತು ಕೆಲವು ಯುವಕರನ್ನು ಸೇರಿಸಿಕೊಂಡು ಅಂತ್ಯಸಂಸ್ಕಾರ ಕೈಗೊಳ್ಳಲು ನಿರ್ಧರಿಸಿದರು.
ಮಳೆಯನ್ನು ಲೆಕ್ಕಿಸದೆ, ಸಂಘದ ವೆಚ್ಚದಲ್ಲೇ ಸಕಲ ಸಿದ್ದತೆಗಳನ್ನು ಮಾಡಿಕೊಂಡು ಅಂತ್ಯಸಂಸ್ಕಾರ ಮಾಡಿದ್ದಲ್ಲದೆ,ಜಾತಿಭೇದವಿಲ್ಲದೆ,ಸ್ವತಃ ನಿರ್ಗತಿಕ ವೃದ್ದೆ ದಲಿತ ಮಹಿಳೆಯ ಶವಯಾತ್ರೆಗೆ ಹೆಗಲು ಕೊಟ್ಟು ಮಾನವೀಯತೆ ಮೆರೆದರು. ನೊಂದವರಿಗೆ ನೆರವಾಗುವ ಹೃದಯ ವೈಶಾಲತೆ ಮೆರೆದ ಸಂಘದ ಸದಸ್ಯರು ಜನರ ಮೆಚ್ಚುಗೆಗೆ ಪಾತ್ರರಾದರು.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…
ಕೇರಳದಲ್ಲಿ ಕೊಬ್ಬರಿ ದರ MSP ಗಿಂತ ಕೆಳಗೆ ಇಳಿದಿದ್ದು, ರೈತರು ಪ್ರತಿ ಕೆ.ಜಿಗೆ…
ಹವಾಮಾನ ಬದಲಾವಣೆಯಿಂದ ಎಲ್ ನಿನೋ ಮತ್ತು ಲಾ ನಿನಾ ಘಟನೆಗಳ ವರ್ತನೆ ಬದಲಾಗುತ್ತಿದ್ದು,…
ಉತ್ತರ ಪ್ರದೇಶ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಒಂದು ಪ್ರಮುಖ ಗೋಆಧಾರಿತ ಉದ್ಯಮ ಅಭಿವೃದ್ಧಿಪಡಿಸಲು…
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…