Advertisement
ಕಾರ್ಯಕ್ರಮಗಳು

ಮಾಧ್ಯಮಗಳು ವಾಸ್ತವಿಕತೆಯ ಪ್ರಚಾರಕ್ಕೆ ಒತ್ತು ನೀಡಬೇಕು- ಶಾಸಕ ಅಂಗಾರ ಕರೆ

Share

ಸುಳ್ಯ: ವಾಸ್ತವಿಕ ಸತ್ಯದ ಪ್ರಚಾರಕ್ಕೆ ಒತ್ತು ನೀಡಬೇಕು. ವಾಸ್ತವವನ್ನು ಮಾತ್ರ ಬಿಂಬಿಸಿದರೆ ಮಾಧ್ಯಮಗಳ ಬಗ್ಗೆ ಜನರಿಗೆ ನಂಬಿಕೆ ಬರುತ್ತದೆ. ಜನರ ನಂಬಿಕೆ ಗಳಿಸಿದ ಮಾಧ್ಯಮಗಳು ಎತ್ತರಕ್ಕೆ ಬೆಳೆಯುತ್ತದೆ ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ.

Advertisement
Advertisement

ಸುಳ್ಯದಲ್ಲಿ ಆರಂಭಗೊಂಡ ‘ಫಾರ್ಚ್ಯೂನ್ ಟಿವಿ’ ಲೋಕಾರ್ಪಣೆ ಸಮಾರಂಭದಲ್ಲಿ ಟಿವಿಯ ಲೋಗೋ ಬಿಡುಗಡೆ ಮಾಡಿ ಅವರು ‌ಮಾತನಾಡಿದರು. ಬೆಳವಣಿಗೆಯ ಪ್ರತಿ ಹಂತದಲ್ಲಿ ಟೀಕೆಗಳು, ವಿರೋಧಗಳು, ಸ್ಪರ್ಧೆಗಳು ಸಹಜ. ಅದನ್ನು ಧನಾತ್ಮಕವಾಗಿ ಸ್ವೀಕರಿಸಿ ಬೆಳೆಯಬೇಕು. ಸುಂದರ ಸುಳ್ಯ ರೂಪಿಸುವುದು ಪ್ರತಿಯೊಬ್ಬರ ಜವಾಬ್ದಾರಿ, ಅದಕ್ಕಾಗಿ ಎಲ್ಲರೂ ಕೈಜೋಡಿಸಬೇಕಾಗಿದೆ ಎಂದು ಅವರು ಹೇಳಿದರು.

Advertisement

ಮಾಧ್ಯಮಗಳು ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿರಲಿ- ಭಾರದ್ವಾಜ್: ಮಾಧ್ಯಮಗಳು ಜನರ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿರಬೇಕು ಎಂದು ಪದ್ಮಶ್ರೀ ಪುರಸ್ಕೃತ ಇಂಜಿನಿಯರ್ ಗಿರೀಶ್ ಭಾರದ್ವಾಜ್ ಹೇಳಿದರು. ನೈಜತೆಯನ್ನು ಬಿಂಬಿಸುವುದರ ಜೊತೆಗೆ ಮಾನವ ಪ್ರೀತಿಯನ್ನು ಬೆಳೆಸಲು ಮಾಧ್ಯಮಗಳು ಸೇತುವೆಯಾಗಬೇಕು ಎಂದರು.

Advertisement

ವಿಶ್ವಾಸಾರ್ಹತೆ ಜೀವಾಳ-ಶ್ರಿನಿವಾಸ್ ಇಂದಾಜೆ: ಪ್ರತಿಯೊಂದು ಮಾಧ್ಯಮಕ್ಕೂ ವಿಶ್ವಾಸಾರ್ಹತೆಯೇ ಜೀವಾಳ ಎಂದು ದ.ಕ‌.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಹೇಳಿದ್ದಾರೆ ನವ ಮಾಧ್ಯಮಗಳ ಯುಗದಲ್ಲಿ ವಿಶ್ವಾಸಾರ್ಹತೆಯನ್ನು ಉಳಿಸಿ ಬೆಳೆಯುವುದು ಪ್ರತಿಯೊಂದು ಮಾಧ್ಯಮಕ್ಕೂ ದೊಡ್ಡ ಸವಾಲು. ಸದೃಢ ಸಮಾಜ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ಮತ್ತು ಜವಾಬ್ದಾರಿ ದೊಡ್ಡದು ಎಂದರು.

Advertisement

ನಾಡಿನ ಪ್ರಗತಿಯ ಸಂಕೇತ-ಖಾದರ್ ಶಾ: ಮಾಧ್ಯಮಗಳು ಆರಂಭವಾಗುವುದು ಒಂದು ನಾಡಿನ ಬೆಳವಣಿಗೆಯ ಸಂಕೇತ ಎಂದು ವಾರ್ತಾಧಿಕಾರಿ ಖಾದರ್ ಶಾ ಅಭಿಪ್ರಾಯಪಟ್ಟರು. ಊರಿನ ಬೆಳವಣಿಗೆಯ ಜೊತೆಗೆ ಮಾಧ್ಯಮಗಳೂ ಬೆಳೆಯಬೇಕು ಎಂದು ಅವರು ಕರೆ ನೀಡಿದರು.

Advertisement

ಜಯರಾಮ ಶೆಟ್ಟಿ ಕಂಬಳಪದವು ದೀಪ ಬೆಳಗಿಸಿ ಫಾರ್ಚ್ಯೂನ್ ಟಿವಿಯನ್ನು ಲೋಕಾರ್ಪಣೆ ಮಾಡಿದರು. ಸುಳ್ಯ ಪೊಲೀಸ್ ಉಪನಿರೀಕ್ಷಕ ಎಂ.ಆರ್.ಹರೀಶ್, ವರ್ತಕರ ಸಂಘದ ಅಧ್ಯಕ್ಷ ಪಿ.ಬಿ‌.ಸುಧಾಕರ ರೈ, ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷ ಶಂಕರ ಪೆರಾಜೆ, ಪ್ರಗತಿಪರ ಕೃಷಿಕ ಸೀತಾರಾಮ ಕೊಲ್ಲರಮೂಲೆ, ಆರ್ ಜೆ ತ್ರಿಶೂಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಫಾರ್ಚ್ಯೂನ್ ಟಿವಿಯ ವ್ಯವಸ್ಥಾಪಕ ನಿರ್ದೇಶಕ ಆಭಿಲಾಷ್ ಕಂಬಳಪದವು ಉಪಸ್ಥಿತರಿದ್ದರು. ಪ್ರಧಾನ ಸಂಪಾದಕ ವಿಖ್ಯಾತ್ ಬಾರ್ಪಣೆ ಸ್ಚಾಗತಿಸಿ, ಪ್ರಸ್ತಾವನೆಗೈದರು.
ಪ್ರಸಾದ್ ಕಾಟೂರು ಮತ್ತು ಸುಶ್ಮಿತ ಕಡಪಳ ಕಾರ್ಯಕ್ರಮ ನಿರೂಪಿಸಿದರು. ಲೋಕೇಶ್ ಗುಡ್ಡೆಮನೆ ಸಹಕರಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

14 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

14 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…

15 hours ago

ಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…

15 hours ago

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು | ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ..?

ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…

18 hours ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

18 hours ago