ಸುಳ್ಯ:ಬಿಜೆಪಿ ಕಚೇರಿಗೆ ಪತ್ರಿಕಾಗೋಷ್ಟಿಗೆ ಬರಲು ಹೇಳಿ ಹೀಗೆ ಮಾಡುವುದಾ ?.ಏನದು ಘಟನೆ ? ಇಲ್ಲಿದೆ…
ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗದೆ ಅಸಮಾಧಾನ ಉಂಟಾಗಿರುವ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯುತ್ತಿದ್ದಂತೆ ಪತ್ರಿಕಾಗೋಷ್ಠಿಗೆಂದು ಆಗಮಿಸಿದ ಮಾಧ್ಯಮಪ್ರತಿನಿಧಿಗಳಿಗೆ ತಡೆ ಮಾಡಿದ ಕಾರಣ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯನ್ನು ಪತ್ರಕರ್ತರು ಬಹಿಷ್ಕರಿಸಿದ ಘಟನೆ ಬುಧವಾರ ನಡೆಯಿತು.ಬಳಿಕ ಬಿಜೆಪಿ ನಾಯಕರು ಪ್ರೆಸ್ ಕ್ಲಬ್ ಗೆ ಆಗಮಿಸಿ ಸುದ್ದಿಗೋಷ್ಟಿ ನಡೆಸಿದರು.
ಅಂಗಾರರಿಗೆ ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಪಕ್ಷದ ತೀರ್ಮಾನಗಳ ಕುರಿತು ವಿವರಿಸಲು ಬುಧವಾರ 12 ಗಂಟೆಗೆ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆಯಲಾಗಿತ್ತು. ಸುದ್ದಿಗೋಷ್ಠಿಗೆಂದು ಕೆಲವು ಪತ್ರಕರ್ತರು ಸ್ವಲ್ಪ ಮೊದಲೇ ಆಗಮಿಸಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರ ಸಭೆ ನಡೆಯುತ್ತಿತ್ತು. ಕಚೇರಿಗೆ ಆಗಮಿಸುತ್ತಿದ್ದಂತೆ ಪತ್ರಕರ್ತರನ್ನು ಅಲ್ಲಿದ್ದ ಕೆಲವು ಕಾರ್ಯಕರ್ತರು ತಡೆದರು. ಕೆಲವು ಮಾಧ್ಯಮದವರು ಆಗಮಿಸಿದ ಸಂದರ್ಭದಲ್ಲಿ ಸಭೆಗೆ ಬಾರದಂತೆ ನಾಯಕರು ಧ್ವನಿವರ್ಧಕದ ಮೂಲಕ ಹೇಳಿದ ಪ್ರಸಂಗವೂ ನಡೆಯಿತು. ಇದರಿಂದ ತೀವ್ರ ಅಸಮಾಧಾನಗೊಂಡ ಪತ್ರಕರ್ತರು ಬಿಜೆಪಿ ಕಚೇರಿಗೆ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸುವುದಿಲ್ಲ ಎಂದು ತೆರಳಿದರು.
ಬಳಿಕ ಬಿಜೆಪಿ ನಾಯಕರು ಪ್ರೆಸ್ ಕ್ಲಬ್ ಗೆ ಆಗಮಿಸಿ ಘಟನೆಗೆ ವಿಷಾದ ವ್ಯಕ್ತಪಡಿಸಿ ಬಳಿಕ ಸುದ್ದಿಗೋಷ್ಠಿ ನಡೆಸಿದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…