ಸುಳ್ಯ:ಬಿಜೆಪಿ ಕಚೇರಿಗೆ ಪತ್ರಿಕಾಗೋಷ್ಟಿಗೆ ಬರಲು ಹೇಳಿ ಹೀಗೆ ಮಾಡುವುದಾ ?.ಏನದು ಘಟನೆ ? ಇಲ್ಲಿದೆ…
ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗದೆ ಅಸಮಾಧಾನ ಉಂಟಾಗಿರುವ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯುತ್ತಿದ್ದಂತೆ ಪತ್ರಿಕಾಗೋಷ್ಠಿಗೆಂದು ಆಗಮಿಸಿದ ಮಾಧ್ಯಮಪ್ರತಿನಿಧಿಗಳಿಗೆ ತಡೆ ಮಾಡಿದ ಕಾರಣ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯನ್ನು ಪತ್ರಕರ್ತರು ಬಹಿಷ್ಕರಿಸಿದ ಘಟನೆ ಬುಧವಾರ ನಡೆಯಿತು.ಬಳಿಕ ಬಿಜೆಪಿ ನಾಯಕರು ಪ್ರೆಸ್ ಕ್ಲಬ್ ಗೆ ಆಗಮಿಸಿ ಸುದ್ದಿಗೋಷ್ಟಿ ನಡೆಸಿದರು.
ಅಂಗಾರರಿಗೆ ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಪಕ್ಷದ ತೀರ್ಮಾನಗಳ ಕುರಿತು ವಿವರಿಸಲು ಬುಧವಾರ 12 ಗಂಟೆಗೆ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆಯಲಾಗಿತ್ತು. ಸುದ್ದಿಗೋಷ್ಠಿಗೆಂದು ಕೆಲವು ಪತ್ರಕರ್ತರು ಸ್ವಲ್ಪ ಮೊದಲೇ ಆಗಮಿಸಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರ ಸಭೆ ನಡೆಯುತ್ತಿತ್ತು. ಕಚೇರಿಗೆ ಆಗಮಿಸುತ್ತಿದ್ದಂತೆ ಪತ್ರಕರ್ತರನ್ನು ಅಲ್ಲಿದ್ದ ಕೆಲವು ಕಾರ್ಯಕರ್ತರು ತಡೆದರು. ಕೆಲವು ಮಾಧ್ಯಮದವರು ಆಗಮಿಸಿದ ಸಂದರ್ಭದಲ್ಲಿ ಸಭೆಗೆ ಬಾರದಂತೆ ನಾಯಕರು ಧ್ವನಿವರ್ಧಕದ ಮೂಲಕ ಹೇಳಿದ ಪ್ರಸಂಗವೂ ನಡೆಯಿತು. ಇದರಿಂದ ತೀವ್ರ ಅಸಮಾಧಾನಗೊಂಡ ಪತ್ರಕರ್ತರು ಬಿಜೆಪಿ ಕಚೇರಿಗೆ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸುವುದಿಲ್ಲ ಎಂದು ತೆರಳಿದರು.
ಬಳಿಕ ಬಿಜೆಪಿ ನಾಯಕರು ಪ್ರೆಸ್ ಕ್ಲಬ್ ಗೆ ಆಗಮಿಸಿ ಘಟನೆಗೆ ವಿಷಾದ ವ್ಯಕ್ತಪಡಿಸಿ ಬಳಿಕ ಸುದ್ದಿಗೋಷ್ಠಿ ನಡೆಸಿದರು.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…