Advertisement
ಸುದ್ದಿಗಳು

ಮಾನವೀಯ ನೆಲೆಗಟ್ಟಿನಡಿ ಪರಿಹಾರ ವಿತರಿಸಲು ಜೆಡಿಎಸ್ ಒತ್ತಾಯ

Share

ಮಡಿಕೇರಿ  : ಮಹಾಮಳೆಯಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ದಾಖಲೆಗಳನ್ನೇ ಆಧಾರವಾಗಿಸದೆ ಮಾನವೀಯ ನೆಲೆಗಟ್ಟಿನಡಿ ಪರಿಹಾರ ವಿತರಿಸುವಂತೆ ಜಾತ್ಯಾತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಸರಕಾರವನ್ನು ಒತ್ತಾಯಿಸಿದ್ದಾರೆ.

ಜಿಲ್ಲಾ ಜೆಡಿಎಸ್ ವತಿಯಿಂದ ಕಾಂಡನಕೊಲ್ಲಿಯ ನಿರಾಶ್ರಿತ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಸಂದರ್ಭ ಅವರು ಮಾತನಾಡಿದರು. ಪ್ರವಾಹ ಮತ್ತು ಭೂಕುಸಿತದಿಂದ ಕೊಡಗಿನ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಹಲವು ಕುಟುಂಬಗಳು ವಾಸದ ಮನೆಗಳನ್ನು ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಅಸಹಾಯಕ ಸ್ಥಿತಿಯಲ್ಲಿರುವ ಸಂತ್ರಸ್ತರಿಗೆ ಮಾನವೀಯತೆಯ ಆಧಾರದಲ್ಲಿ ಪರಿಹಾರವನ್ನು ಸಕಾಲದಲ್ಲಿ ಒದಗಿಸದೆ ದಾಖಲೆಗಳನ್ನೇ ಕಡ್ಡಾಯಗೊಳಿಸಲಾಗುತ್ತಿದೆ ಎಂದು ಗಣೇಶ್ ಟೀಕಿಸಿದರು.

ಕಾಂಡನಕೊಲ್ಲಿಯ ಬಾವುಕ ಮತ್ತು ಬೀಪಾತು ಎಂಬುವವರು ಅಣ್ಣ ತಂಗಿಯರಾಗಿದ್ದು, ಕಳೆದ 45 ವರ್ಷಗಳಿಂದ ವಾಸವಿದ್ದ ಮನೆಯನ್ನು ಮಹಾಮಳೆಯಿಂದ ಕಳೆದುಕೊಂಡಿದ್ದಾರೆ. ಇವರ ಮನೆಗೆ ಹಕ್ಕುಪತ್ರ ದೊರೆಯದೆ ಇದ್ದ ಕಾರಣವನ್ನೇ ನೆಪ ಮಾಡಿಕೊಂಡು ಮನೆ ಕಳೆದುಕೊಂಡವರಿಗೆ ನೀಡಲಾಗುವ ಪರಿಹಾರದ ಮೊತ್ತವನ್ನು ನೀಡದೆ ವಂಚಿಸಲಾಗಿದೆ. ವಾರಸುದಾರರು ಯಾರೂ ಇಲ್ಲದೆ ವೃದ್ಧಾಪ್ಯದ ದಿನಗಳನ್ನು ಕಳೆಯುತ್ತಿರುವ ಇವರಿಬ್ಬರ ಬದುಕು ಅತಂತ್ರವಾಗಿದೆ. ಆದ್ದರಿಂದ ಜಿಲ್ಲಾಡಳಿತ ದಾಖಲೆಗಳನ್ನು ಕಡ್ಡಾಗೊಳಿಸದೆ ಪ್ರತ್ಯಕ್ಷವಾಗಿ ಕಾಣುತ್ತಿರುವ ನಷ್ಟವನ್ನು ತುಂಬಿಕೊಡಬೇಕೆಂದು ಗಣೇಶ್ ಒತ್ತಾಯಿಸಿದರು. ಇದೇ ರೀತಿಯ ಅನೇಕ ಪ್ರಕರಣಗಳು ಜಿಲ್ಲೆಯಲ್ಲಿದ್ದು, ಸಂತ್ರಸ್ತರು ಪರಿಹಾರದಿಂದ ವಂಚಿತರಾಗದಂತೆ ಸರಕಾರ ಸೂಕ್ತ ನಿರ್ದೇಶನ ನೀಡಿ ಪರಿಹಾರದ ಮೊತ್ತವನ್ನು ಸಮಾನವಾಗಿ ಹಂಚಿಕೆ ಮಾಡಬೇಕೆಂದು ಅವರು ಹೇಳಿದರು.

ಮನೆ ಕಳೆದುಕೊಂಡಿರುವ ಅಣ್ಣ, ತಂಗಿಗೆ ಜೆಡಿಎಸ್ ವತಿಯಿಂದ ಆರ್ಥಿಕ ನೆರವನ್ನು ವಿತರಿಸಲಾಯಿತು. ಈ ಸಂದರ್ಭ ಪಕ್ಷದ ಪ್ರಮುಖರಾದ ಸುನೀಲ್, ಡೆನ್ನಿ ಬರೋಸ್, ಷರೀಫ್, ಅಬ್ದುಲ್ಲ, ಯೂಸುಫ್. ಹನೀಫ್ ಮತ್ತಿತರರು ಹಾಜರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

8 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

9 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

12 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

16 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

16 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago