Advertisement
ಸುದ್ದಿಗಳು

ಮಾನವೀಯ ನೆಲೆಗಟ್ಟಿನಡಿ ಪರಿಹಾರ ವಿತರಿಸಲು ಜೆಡಿಎಸ್ ಒತ್ತಾಯ

Share

ಮಡಿಕೇರಿ  : ಮಹಾಮಳೆಯಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ದಾಖಲೆಗಳನ್ನೇ ಆಧಾರವಾಗಿಸದೆ ಮಾನವೀಯ ನೆಲೆಗಟ್ಟಿನಡಿ ಪರಿಹಾರ ವಿತರಿಸುವಂತೆ ಜಾತ್ಯಾತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಸರಕಾರವನ್ನು ಒತ್ತಾಯಿಸಿದ್ದಾರೆ.

ಜಿಲ್ಲಾ ಜೆಡಿಎಸ್ ವತಿಯಿಂದ ಕಾಂಡನಕೊಲ್ಲಿಯ ನಿರಾಶ್ರಿತ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಸಂದರ್ಭ ಅವರು ಮಾತನಾಡಿದರು. ಪ್ರವಾಹ ಮತ್ತು ಭೂಕುಸಿತದಿಂದ ಕೊಡಗಿನ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಹಲವು ಕುಟುಂಬಗಳು ವಾಸದ ಮನೆಗಳನ್ನು ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಅಸಹಾಯಕ ಸ್ಥಿತಿಯಲ್ಲಿರುವ ಸಂತ್ರಸ್ತರಿಗೆ ಮಾನವೀಯತೆಯ ಆಧಾರದಲ್ಲಿ ಪರಿಹಾರವನ್ನು ಸಕಾಲದಲ್ಲಿ ಒದಗಿಸದೆ ದಾಖಲೆಗಳನ್ನೇ ಕಡ್ಡಾಯಗೊಳಿಸಲಾಗುತ್ತಿದೆ ಎಂದು ಗಣೇಶ್ ಟೀಕಿಸಿದರು.

ಕಾಂಡನಕೊಲ್ಲಿಯ ಬಾವುಕ ಮತ್ತು ಬೀಪಾತು ಎಂಬುವವರು ಅಣ್ಣ ತಂಗಿಯರಾಗಿದ್ದು, ಕಳೆದ 45 ವರ್ಷಗಳಿಂದ ವಾಸವಿದ್ದ ಮನೆಯನ್ನು ಮಹಾಮಳೆಯಿಂದ ಕಳೆದುಕೊಂಡಿದ್ದಾರೆ. ಇವರ ಮನೆಗೆ ಹಕ್ಕುಪತ್ರ ದೊರೆಯದೆ ಇದ್ದ ಕಾರಣವನ್ನೇ ನೆಪ ಮಾಡಿಕೊಂಡು ಮನೆ ಕಳೆದುಕೊಂಡವರಿಗೆ ನೀಡಲಾಗುವ ಪರಿಹಾರದ ಮೊತ್ತವನ್ನು ನೀಡದೆ ವಂಚಿಸಲಾಗಿದೆ. ವಾರಸುದಾರರು ಯಾರೂ ಇಲ್ಲದೆ ವೃದ್ಧಾಪ್ಯದ ದಿನಗಳನ್ನು ಕಳೆಯುತ್ತಿರುವ ಇವರಿಬ್ಬರ ಬದುಕು ಅತಂತ್ರವಾಗಿದೆ. ಆದ್ದರಿಂದ ಜಿಲ್ಲಾಡಳಿತ ದಾಖಲೆಗಳನ್ನು ಕಡ್ಡಾಗೊಳಿಸದೆ ಪ್ರತ್ಯಕ್ಷವಾಗಿ ಕಾಣುತ್ತಿರುವ ನಷ್ಟವನ್ನು ತುಂಬಿಕೊಡಬೇಕೆಂದು ಗಣೇಶ್ ಒತ್ತಾಯಿಸಿದರು. ಇದೇ ರೀತಿಯ ಅನೇಕ ಪ್ರಕರಣಗಳು ಜಿಲ್ಲೆಯಲ್ಲಿದ್ದು, ಸಂತ್ರಸ್ತರು ಪರಿಹಾರದಿಂದ ವಂಚಿತರಾಗದಂತೆ ಸರಕಾರ ಸೂಕ್ತ ನಿರ್ದೇಶನ ನೀಡಿ ಪರಿಹಾರದ ಮೊತ್ತವನ್ನು ಸಮಾನವಾಗಿ ಹಂಚಿಕೆ ಮಾಡಬೇಕೆಂದು ಅವರು ಹೇಳಿದರು.

ಮನೆ ಕಳೆದುಕೊಂಡಿರುವ ಅಣ್ಣ, ತಂಗಿಗೆ ಜೆಡಿಎಸ್ ವತಿಯಿಂದ ಆರ್ಥಿಕ ನೆರವನ್ನು ವಿತರಿಸಲಾಯಿತು. ಈ ಸಂದರ್ಭ ಪಕ್ಷದ ಪ್ರಮುಖರಾದ ಸುನೀಲ್, ಡೆನ್ನಿ ಬರೋಸ್, ಷರೀಫ್, ಅಬ್ದುಲ್ಲ, ಯೂಸುಫ್. ಹನೀಫ್ ಮತ್ತಿತರರು ಹಾಜರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೂರು ವರ್ಷಗಳಲ್ಲಿ 27% ಏರಿದ ಅಡಿಕೆ ಉತ್ಪಾದನಾ ವೆಚ್ಚ – ರೈತರಿಗೆ ಲಾಭ ಸಿಗಬೇಕಾದರೆ ಕನಿಷ್ಠ ಬೆಲೆ ಎಷ್ಟು ಇರಬೇಕು?

2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…

5 hours ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

6 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

7 hours ago

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

13 hours ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

13 hours ago

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

16 hours ago