Advertisement
ಸುದ್ದಿಗಳು

ಮಾರ್ಚ್ 22 ರಂದು ಅರಂತೋಡಿನಲ್ಲಿ ಅಂಡರ್ ಆರ್ಮ್ ಕ್ರಿಕೆಟ್‌ ಪಂದ್ಯಾಟ ಹಾಗೂ ಸನ್ಮಾನ ಸಮಾರಂಭ

Share

ಸುಳ್ಯ: ಅರಂತೋಡು ಆರ್ಟ್ಸ್ &ಸ್ಪೊರ್ಟ್ಸ್ ಕ್ಲಬ್‌ ಇದರ ಅಶ್ರಯದಲ್ಲಿ 3 ನೇ ವರ್ಷದ 30 ಗಜಗಳ 7 ಜನರ ಮುಕ್ತ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಸಮಾರಂಭ ಮಾರ್ಚ್ 22 ರಂದು ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ.

ಮಾರ್ಚ್ 22ರಂದು ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು ಸಮಾರಂಭವನ್ನು ಅರಂತೋಡು ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ ಉದ್ಘಾಟಿಸಲಿದ್ದಾರೆ. ಅರಂತೋಡು ಸ್ಪೊರ್ಟ್ಸ್ ಕ್ಲಬ್ ಅಧ್ಯಕ್ಷ ರಿಯಾಝ್ ಸಣ್ಣಮನೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಆತಿಥಿಯಾಗಿ ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಲೀಲಾವತಿ ಕೊಡಂಕೇರಿ, ಸುಳ್ಯ ತಾಲ್ಲೂಕು ಪಂಚಾಯತ್ ಸದಸ್ಯೆ ಪುಷ್ಪಾ ಮೇದಪ್ಪ, ಅರಂತೋಡು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ, ಅರಂತೋಡು ತೊಡಿಕಾನ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ ಕುತ್ತಮೊಟ್ಟೆ, ಅರಂತೋಡು ಕೃಷಿ ಪತ್ತಿನ ಸಹಕಾರಿ ಉಪಾಧ್ಯಕ್ಷ ದಯಾನಂದ ಕುರುಂಜಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಾಜಾರಾಮ್ ಭಟ್ ಬೆಟ್ಟ, ಅರಂತೋಡು ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ವಿನೋದ್ ಕುಮಾರ್ , ಕುಸುಮಾಧರ ಅಡ್ಕಬಳೆ, ಅರಂತೋಡು ಗ್ರಾಮ ಪಂಚಾಯತ್ ಸದಸ್ಯರಾದ ಗಂಗಾಧರ ಬನ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಸ್ .ಡಿ.ಎಮ್ .ಸಿ.ಅಧ್ಯಕ್ಷ ಬಿ.ಹೆಚ್.ಪದ್ಮಯ್ಯ, ಅರಂತೋಡು ಸ್ಪೊರ್ಟ್ಸ್ ಕ್ಲಬ್ ಗೌರವಧ್ಯಕ್ಷ ಅನ್ವರ್ ಕೆ.ಎಮ್ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ರಾಷ್ಟ್ರ ಮಟ್ಟದ ಕಬಡ್ಡಿ ಕ್ರೀಡಾ ಪಟು ಸಾತ್ವಿ ಮೇರ್ಕಜೆ ಹಾಗೂ ರಾಷ್ಟ್ರ ಮಟ್ಟದ ಕಬಡ್ಡಿ ಮತ್ತು ಕೊಕ್ಕೋ ಕ್ರೀಡಾಪಟು ವರ್ಷ ಯು.ವಿ ಮತ್ತು ಜಿಲ್ಲಾ ಮಟ್ಟದ ಕ್ರೀಡಾ ಪಟು ಮಹಮ್ಮದ್ ಅರ್ಷಾದ್ ಗುಂಡಿ ಇವರನ್ನು ಸನ್ಮಾನಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭ ದಲ್ಲಿ ಅರಂತೋಡು ಸ್ಪೊರ್ಟ್ಸ್ ಕ್ಲಬ್ ಅಧ್ಯಕ್ಷ ರಿಯಾಝ್ ರವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ರಾಜೀವ್ ಯೂತ್ ಪೌಂಡೇಶನ್ ರಾಜ್ಯಾಧ್ಯಕ್ಷರಾದ ಟಿ.ಎಮ್ .ಶಹೀದ್ ಬಹುಮಾನ ವಿತರಿಸಲಿದ್ದಾರೆ. ಮುಖ್ಯ ಆತಿಥಿಯಾಗಿ ಕ್ಯಾನ್ಸರ್ ತಜ್ಞ ಡಾ ರಘು, ಸುಳ್ಯ ಪಠೇಲ್ ಮೆಡಿಕಲ್ ಮಾಲಕ ಬದುರುದ್ದೀನ್ ಪಠೇಲ್, ತಾಜುದ್ದೀನ್ ಅರಂತೋಡು , ಅಬ್ದುಲ್ ಖಾದರ್ ಪಠೇಲ್, ದ.ಕ.ಎನ್ .ಎಸ್.ಯು.ಐ.ಉಪಾಧ್ಯಕ್ಷ ಶವಾದ್ ಗೂನಡ್ಕ, ಮಾಜಿ ಸೈನಿಕ ಫಸೀಲು ಅರಂತೋಡು, ಸುಳ್ಯ ತಾಲ್ಲೂಕು ಅಲ್ಪಸಂಖ್ಯಾತ ಸಹಕಾರಿ ಸಂಘದ ನಿರ್ದೇಶಕ ಅಬ್ದುಲ್ ಖಾದರ್ ಮೊಟ್ಟೆಂಗಾರ್ ಮೊದಲಾದವರು ಭಾಗವಹಿಸಲಿದ್ದಾರೆ.

ಪ್ರಥಮ ಬಹುಮಾನ 8080 ನಗದು ಮತ್ತು ಸೌಹಾರ್ದ ಟ್ರೋಫಿ ದ್ವಿತೀಯ ಬಹುಮಾನ 5050 ನಗದು ಮತ್ತು ಸೌಹಾರ್ದ ಟ್ರೋಫಿ ನೀಡಲಾಗುವುದು ಎಂದು ಸಂಘಟಕರಾದ ಶರಫುದ್ದೀನ್, ಮುನೀರ್ ಸಂಟ್ಯಾರ್, ರಿಯಾಝ್ ಸಣ್ಣಮನೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

15 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

22 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago