ಮಾವಿನಕಟ್ಟೆ: ಬೆನ್ನು ಮೂಳೆಯ ವಕ್ರತೆ ಎಂಬ ವಿರಳವಾದ ಕಾಯಿಲೆಯಿಂದ ಬಳಲುತ್ತಿರುವ ಮಾವಿನಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಅಮೃತಾಳಿಗೆ ಬೆಳ್ಳಾರೆ ಮತ್ತು ಸುಳ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆ ಸಹಾಯಧನ ಹಾಗೂ ಬರೆಯುವ ಪುಸ್ತಕ ನೀಡಿ ನೆರವಾಗಿದೆ.
ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಸಹಾಯಧನ ಹಾಗೂ ಬರೆಯುವ ಪುಸ್ತಕವನ್ನು ಹಸ್ತಾಂತರಿಸಿದರು. ಉಪನ್ಯಾಸಕ ಗಣೇಶ್ ನಾಯಕ್, ಮಾವಿನಕಟ್ಟೆ ಶಾಲಾ ಮುಖ್ಯೋಪಾಧ್ಯಾಯಿನಿ ಪುಷ್ಪಲತಾ, ಅಮೃತಾಳ ಅಜ್ಜಿ ಜಾನಕಿ ಉಪಸ್ಥಿತರಿದ್ದರು. ಅಮೃತಾಳ ಚಿಕಿತ್ಸೆಗೆ ರೂಪಾಯಿ 4 ಲಕ್ಷ ವ್ಯಯಿಸಬೇಕಾಗಿದ್ದು, ಬಡತನದಿಂದ ಬಳಲುತ್ತಿರುವ ಕುಟುಂಬಕ್ಕೆ ಸಹೃದಯಿಗಳ ನೆರವಿನ ಅಗತ್ಯವಿದೆ.
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…