ಧರ್ಮಸ್ಥಳ: ಖ್ಯಾತ ನಾಟಕ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದ್ದಾರೆ.
ಮಾಸ್ಟರ್ ಹಿರಣ್ಣಯ್ಯ ತಮ್ಮ ನಾಟಕಗಳಲ್ಲಿ ಧಾರ್ಮಿಕ ಮುಖಂಡರು, ಪೊಲೀಸ್ ಇಲಾಖೆ, ರಾಜಕಾರಣಿಗಳು – ಎಲ್ಲರನ್ನೂ ತಮ್ಮ ಕಟು ಮಾತುಗಳಿಂದ ಚುಚ್ಚುತ್ತಿದ್ದರು. ಕೇಳುವಾಗ ಹಾಸ್ಯದೊಂದಿಗೆ ಸ್ವಲ್ಪ ಕಠಿಣವಾಗಿ ಕಂಡರೂ ಅದರಲ್ಲಿ ಎಚ್ಚರಿಕೆಯ ಸಂದೇಶವಿತ್ತು. ಅವರ ನಿಧನದಿಂದ ಒಬ್ಬ ಒಳ್ಳೆಯ ಕಲಾವಿದ ಹಾಗೂ ಸಮಾಜ ಸುಧಾರಕನನ್ನು ಕಳೆದುಕೊಂಡಂತಾಗಿದೆ. ತನ್ನ ತಂದೆ ಕೀರ್ತಿಶೇಷ ರತ್ನವರ್ಮ ಹೆಗ್ಗಡೆಯವರು ಬೆಂಗಳೂರಿಗೆ ಹೋದಾಗ ಮಾಸ್ಟರ್ ಹಿರಣ್ಣಯ್ಯನವರ ನಾಟಕ ನೋಡದೆ ಹಿಂದೆ ಬರುತ್ತಿರಲಿಲ್ಲ ಎಂದು ಹೆಗ್ಗಡೆಯವರು ತಿಳಿಸಿದ್ದಾರೆ.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…