ಧರ್ಮಸ್ಥಳ: ಖ್ಯಾತ ನಾಟಕ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದ್ದಾರೆ.
ಮಾಸ್ಟರ್ ಹಿರಣ್ಣಯ್ಯ ತಮ್ಮ ನಾಟಕಗಳಲ್ಲಿ ಧಾರ್ಮಿಕ ಮುಖಂಡರು, ಪೊಲೀಸ್ ಇಲಾಖೆ, ರಾಜಕಾರಣಿಗಳು – ಎಲ್ಲರನ್ನೂ ತಮ್ಮ ಕಟು ಮಾತುಗಳಿಂದ ಚುಚ್ಚುತ್ತಿದ್ದರು. ಕೇಳುವಾಗ ಹಾಸ್ಯದೊಂದಿಗೆ ಸ್ವಲ್ಪ ಕಠಿಣವಾಗಿ ಕಂಡರೂ ಅದರಲ್ಲಿ ಎಚ್ಚರಿಕೆಯ ಸಂದೇಶವಿತ್ತು. ಅವರ ನಿಧನದಿಂದ ಒಬ್ಬ ಒಳ್ಳೆಯ ಕಲಾವಿದ ಹಾಗೂ ಸಮಾಜ ಸುಧಾರಕನನ್ನು ಕಳೆದುಕೊಂಡಂತಾಗಿದೆ. ತನ್ನ ತಂದೆ ಕೀರ್ತಿಶೇಷ ರತ್ನವರ್ಮ ಹೆಗ್ಗಡೆಯವರು ಬೆಂಗಳೂರಿಗೆ ಹೋದಾಗ ಮಾಸ್ಟರ್ ಹಿರಣ್ಣಯ್ಯನವರ ನಾಟಕ ನೋಡದೆ ಹಿಂದೆ ಬರುತ್ತಿರಲಿಲ್ಲ ಎಂದು ಹೆಗ್ಗಡೆಯವರು ತಿಳಿಸಿದ್ದಾರೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…