ಮಾ.1ರಂದು ದುಗಲಡ್ಕದಲ್ಲಿ ಸಾಂಸ್ಕೃತಿಕ ಸಂಭ್ರಮ ಮತ್ತು ಸನ್ಮಾನ

February 25, 2020
9:45 AM

ಸುಳ್ಯ: ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳು ಕೂಟ ದುಗಲಡ್ಕ ಇದರ ಆಶ್ರಯದಲ್ಲಿ ಮಿತ್ರ -ಕುರಲ್ ಸಾಂಸ್ಕೃತಿಕ ಸಂಭ್ರಮ ಹಾಗೂ ಇಂಡಿಯಾ ಇಂಟರ್ ನ್ಯಾಷನಲ್ ಫ್ರೆಂಡ್ ಶಿಪ್ ಸೊಸೈಟಿ ನವದೆಹಲಿ ಇವರಿಂದ ರಾಷ್ಟ್ರೀಯ ಗೌರವ ಅವಾರ್ಡ್‍ಗೆ ಭಾಜನರಾದ ಕೆ.ಟಿ.ವಿಶ್ವನಾಥರಿಗೆ ಸನ್ಮಾನ ಕಾರ್ಯಕ್ರಮ ಮಾ.1ರಂದು ದುಗಲಡ್ಕ ಪ್ರೌಢಶಾಲಾ ವಠಾರದಲ್ಲಿ ನಡೆಯುಲಿದೆ ಎಂದು ಸಂಘಟನಾ ಸಮಿತಿ ಅಧ್ಯಕ್ಷ ಜಯರಾಮ ಶೆಟ್ಟಿ ಕೆ.ಎ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Advertisement
Advertisement

ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ಗೌರವ ಅವಾರ್ಡ್ ಪುರಸ್ಕೃತರಾದ ಕೆ.ಟಿ.ವಿಶ್ವನಾಥ ಅವರನ್ನು ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್‍ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಸನ್ಮಾನಿಸಲಿದ್ದಾರೆ. ವಿಶ್ರಾಂತ ಪ್ರಾಂಶುಪಾಲ ಡಾ.ಪ್ರಭಾಕರ ಶಿಶಿಲ ಅಭಿನಂದನಾ ಭಾಷಣ ಮಾಡಲಿದ್ದಾರೆ. ಮಿತ್ರ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಪುರುಷೋತ್ತಮ ಗೌಡ ಮಾಣಿಬೆಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಜಿ.ಪಂ.ಸದಸ್ಯ ರಾದ ಎಸ್.ಎನ್.ಮನ್ಮಥ, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಅರೆಭಾಷೆ ಅಕಾಡೆಮಿಯ ಮಾಜಿ ಅಧ್ಯಕ್ಷ ಪಿ.ಸಿ.ಜಯರಾಮ, ದೆಹಲಿ ಕನ್ನಡ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ, ನ.ಪಂ.ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ನ.ಪಂ.ಸದಸ್ಯರಾದ ಶಶಿಕಲಾ ನೀರಬಿದಿರೆ, ಬಾಲಕೃಷ್ಣ ರೈ ದುಗಲಡ್ಕ, ದುಗಲಡ್ಕ ಪ್ರೌಢಶಾಲಾ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಎ.ಯು. ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಾಹಿತಿ ಭೀಮರಾವ್ ವಾಷ್ಠರ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಸಂಜೆ 5 ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

ಪತ್ರಿಕಾಗೋಷ್ಠಿಯಲ್ಲಿ ಸಂಘಟನಾ ಸಮಿತಿಯ ಕಾರ್ಯದರ್ಶಿ ಭವಾನಿಶಂಕರ ಕಲ್ಮಡ್ಕ, ಕೋಶಾಧಿಕಾರಿ ಮನೋಜ್ ಪಾನತ್ತಿಲ, ಕುರಲ್ ತುಳು ಕೂಟದ ಅಧ್ಯಕ್ಷ ನಾರಾಯಣ ಟೈಲರ್, ಪದಾಧಿಕಾರಿಗಳಾದ ರಮೇಶ್ ನೀರಬಿದಿರೆ, ಭಾಗೀಶ್ ಕೆ.ಟಿ., ಕೃಷ್ಣ ಸ್ವಾಮಿ, ಸುರೇಶ್ ನಾಯಕ್ ಉಪಸ್ಥಿತರಿದ್ದರು.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ
June 2, 2025
7:33 AM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ
June 2, 2025
7:26 AM
by: ದ ರೂರಲ್ ಮಿರರ್.ಕಾಂ
ಸಿಂಹ ರಾಶಿಯನ್ನು ಪ್ರವೇಶಿಸಲಿರುವ ಮಂಗಳ | ಜೂನ್ 7 ರಿಂದ 3 ರಾಶಿಯವರಿಗೆ ಶುಭ ಫಲ
June 2, 2025
7:16 AM
by: ದ ರೂರಲ್ ಮಿರರ್.ಕಾಂ
ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….
June 1, 2025
6:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group