ಸುಳ್ಯ: ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳು ಕೂಟ ದುಗಲಡ್ಕ ಇದರ ಆಶ್ರಯದಲ್ಲಿ ಮಿತ್ರ -ಕುರಲ್ ಸಾಂಸ್ಕೃತಿಕ ಸಂಭ್ರಮ ಹಾಗೂ ಇಂಡಿಯಾ ಇಂಟರ್ ನ್ಯಾಷನಲ್ ಫ್ರೆಂಡ್ ಶಿಪ್ ಸೊಸೈಟಿ ನವದೆಹಲಿ ಇವರಿಂದ ರಾಷ್ಟ್ರೀಯ ಗೌರವ ಅವಾರ್ಡ್ಗೆ ಭಾಜನರಾದ ಕೆ.ಟಿ.ವಿಶ್ವನಾಥರಿಗೆ ಸನ್ಮಾನ ಕಾರ್ಯಕ್ರಮ ಮಾ.1ರಂದು ದುಗಲಡ್ಕ ಪ್ರೌಢಶಾಲಾ ವಠಾರದಲ್ಲಿ ನಡೆಯುಲಿದೆ ಎಂದು ಸಂಘಟನಾ ಸಮಿತಿ ಅಧ್ಯಕ್ಷ ಜಯರಾಮ ಶೆಟ್ಟಿ ಕೆ.ಎ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ಗೌರವ ಅವಾರ್ಡ್ ಪುರಸ್ಕೃತರಾದ ಕೆ.ಟಿ.ವಿಶ್ವನಾಥ ಅವರನ್ನು ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಸನ್ಮಾನಿಸಲಿದ್ದಾರೆ. ವಿಶ್ರಾಂತ ಪ್ರಾಂಶುಪಾಲ ಡಾ.ಪ್ರಭಾಕರ ಶಿಶಿಲ ಅಭಿನಂದನಾ ಭಾಷಣ ಮಾಡಲಿದ್ದಾರೆ. ಮಿತ್ರ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಪುರುಷೋತ್ತಮ ಗೌಡ ಮಾಣಿಬೆಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿ.ಪಂ.ಸದಸ್ಯ ರಾದ ಎಸ್.ಎನ್.ಮನ್ಮಥ, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಅರೆಭಾಷೆ ಅಕಾಡೆಮಿಯ ಮಾಜಿ ಅಧ್ಯಕ್ಷ ಪಿ.ಸಿ.ಜಯರಾಮ, ದೆಹಲಿ ಕನ್ನಡ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ, ನ.ಪಂ.ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ನ.ಪಂ.ಸದಸ್ಯರಾದ ಶಶಿಕಲಾ ನೀರಬಿದಿರೆ, ಬಾಲಕೃಷ್ಣ ರೈ ದುಗಲಡ್ಕ, ದುಗಲಡ್ಕ ಪ್ರೌಢಶಾಲಾ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಎ.ಯು. ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಾಹಿತಿ ಭೀಮರಾವ್ ವಾಷ್ಠರ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಸಂಜೆ 5 ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ಸಂಘಟನಾ ಸಮಿತಿಯ ಕಾರ್ಯದರ್ಶಿ ಭವಾನಿಶಂಕರ ಕಲ್ಮಡ್ಕ, ಕೋಶಾಧಿಕಾರಿ ಮನೋಜ್ ಪಾನತ್ತಿಲ, ಕುರಲ್ ತುಳು ಕೂಟದ ಅಧ್ಯಕ್ಷ ನಾರಾಯಣ ಟೈಲರ್, ಪದಾಧಿಕಾರಿಗಳಾದ ರಮೇಶ್ ನೀರಬಿದಿರೆ, ಭಾಗೀಶ್ ಕೆ.ಟಿ., ಕೃಷ್ಣ ಸ್ವಾಮಿ, ಸುರೇಶ್ ನಾಯಕ್ ಉಪಸ್ಥಿತರಿದ್ದರು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…