ಬೆಳ್ಳಾರೆ : ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ಇದರ ಆಶ್ರಯದಲ್ಲಿ ಮಾ.1 ರಂದು ಬೆಳಗ್ಗೆ 8 ರಿಂದ ಸಂಜೆ 4 ರ ತನಕ ಮುಕ್ಕೂರು ಶಾಲಾ ವಠಾರದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ ನಡೆಯಲಿದೆ.
ಈ ಸಂದರ್ಭದಲ್ಲಿ ಆಧಾರ್ ಹೊಸ ನೋಂದಣಿ, ವಿಳಾಸ ಬದಲಾವಣೆ, ಜನ್ಮದಿನಾಂಕ ಬದಲಾವಣೆ, ಹೆಸರು ಬದಲಾವಣೆಗೆ ಅವಕಾಶ ಇದೆ. ಇದಕ್ಕಾಗಿ ಅಗತ್ಯ ದಾಖಲೆ ಪತ್ರಗಳನ್ನು ಸಲ್ಲಿಸಿ ಪ್ರಯೋಜನ ಪಡೆದುಕೊಳ್ಳಬಹುದು.
ಪೂರ್ವಭಾವಿಯಾಗಿ ಫೆ.23 ರಂದು ಮುಕ್ಕೂರು ಶಾಲೆಯಲ್ಲಿ ಅರ್ಜಿ ವಿತರಣೆ ಮತ್ತು ಅರ್ಜಿ ಭರ್ತಿ ಮಾಡಲಾಗುತ್ತದೆ. ಬೆಳಗ್ಗೆ ಸಭಾ ಕಾರ್ಯಕ್ರಮವನ್ನು ವೈದ್ಯ ಡಾ| ನರಸಿಂಹ ಶರ್ಮಾ ಕಾನಾವು ಉದ್ಘಾಟಿಸಲಿದ್ದಾರೆ. ನೇಸರ ಯುವಕ ಮಂಡಲ ಅಧ್ಯಕ್ಷ ರಮೇಶ್ ಕಾನಾವು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪೆರುವಾಜೆ ಗ್ರಾ.ಪಂ. ಅಧ್ಯಕ್ಷೆ ಅನುಸೂಯ, ಸದಸ್ಯ ಉಮೇಶ್ ಕೆಎಂಬಿ, ಮುಕ್ಕೂರು ಹಾ.ಉ.ಸ.ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ, ಸುಳ್ಯ ಉಪವಿಭಾಗ ಅಂಚೆ ನಿರೀಕ್ಷಕ ಸುದೀಪ್ ಕುಮಾರ್ ಬಿ, ನೇಸರ ಯುವಕ ಮಂಡಲ ಗೌರವಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ ಭಾಗವಹಿಸಲಿದ್ದಾರೆ.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…