ಬೆಳ್ಳಾರೆ : ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ಇದರ ಆಶ್ರಯದಲ್ಲಿ ಮಾ.1 ರಂದು ಬೆಳಗ್ಗೆ 8 ರಿಂದ ಸಂಜೆ 4 ರ ತನಕ ಮುಕ್ಕೂರು ಶಾಲಾ ವಠಾರದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ ನಡೆಯಲಿದೆ.
ಈ ಸಂದರ್ಭದಲ್ಲಿ ಆಧಾರ್ ಹೊಸ ನೋಂದಣಿ, ವಿಳಾಸ ಬದಲಾವಣೆ, ಜನ್ಮದಿನಾಂಕ ಬದಲಾವಣೆ, ಹೆಸರು ಬದಲಾವಣೆಗೆ ಅವಕಾಶ ಇದೆ. ಇದಕ್ಕಾಗಿ ಅಗತ್ಯ ದಾಖಲೆ ಪತ್ರಗಳನ್ನು ಸಲ್ಲಿಸಿ ಪ್ರಯೋಜನ ಪಡೆದುಕೊಳ್ಳಬಹುದು.
ಪೂರ್ವಭಾವಿಯಾಗಿ ಫೆ.23 ರಂದು ಮುಕ್ಕೂರು ಶಾಲೆಯಲ್ಲಿ ಅರ್ಜಿ ವಿತರಣೆ ಮತ್ತು ಅರ್ಜಿ ಭರ್ತಿ ಮಾಡಲಾಗುತ್ತದೆ. ಬೆಳಗ್ಗೆ ಸಭಾ ಕಾರ್ಯಕ್ರಮವನ್ನು ವೈದ್ಯ ಡಾ| ನರಸಿಂಹ ಶರ್ಮಾ ಕಾನಾವು ಉದ್ಘಾಟಿಸಲಿದ್ದಾರೆ. ನೇಸರ ಯುವಕ ಮಂಡಲ ಅಧ್ಯಕ್ಷ ರಮೇಶ್ ಕಾನಾವು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪೆರುವಾಜೆ ಗ್ರಾ.ಪಂ. ಅಧ್ಯಕ್ಷೆ ಅನುಸೂಯ, ಸದಸ್ಯ ಉಮೇಶ್ ಕೆಎಂಬಿ, ಮುಕ್ಕೂರು ಹಾ.ಉ.ಸ.ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ, ಸುಳ್ಯ ಉಪವಿಭಾಗ ಅಂಚೆ ನಿರೀಕ್ಷಕ ಸುದೀಪ್ ಕುಮಾರ್ ಬಿ, ನೇಸರ ಯುವಕ ಮಂಡಲ ಗೌರವಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ ಭಾಗವಹಿಸಲಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…