ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೋವಿಡ್-19 (ಕೊರೋನಾ 19 ರೋಗಾಣು) ವಿರುದ್ಧ ಹೋರಾಡಲು ಮಾರ್ಚ್ 22 ರಂದು ಬೆಳಗ್ಗೆ 7 ರಿಂದ ರಾತ್ರಿ 9 ರ ತನಕ ‘ಜನತಾ ಕರ್ಫ್ಯೂ’ಗೆ ಕರೆ ನೀಡಿದ್ದಾರೆ. ಪ್ರಧಾನಮಂತ್ರಿಯವರ ಈ ಕರೆಗೆ ಬೆಂಬಲಿಸಿ ಇಡೀ ಜಗತ್ತಿನಾದ್ಯಂತ ಇದೇ ಮೊದಲ ಬಾರಿ ಜನತೆಯು ರಾಷ್ಟ್ರಹಿತಕ್ಕಾಗಿ ತೆಗೆದುಕೊಂಡಿರುವ ಬಂದ್ ಆಗಿರಬಹುದು. ಹೀಗಾಗಿ ನಾಗರಿಕರೆಲ್ಲರು ಬೆಂಬಲಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಮನವಿ ಮಾಡಿದೆ.
ಕೊರೋನಾದಂತಹ ರಾಷ್ಟ್ರೀಯ ಆಪತ್ತಿನ ಸಮಯದಲ್ಲಿ ಜನಜಾಗೃತಿಯನ್ನು ಮಾಡಲು ಹಿಂದೂ ಜನಜಾಗೃತಿ ಸಮಿತಿ ಕಾರ್ಯಪ್ರವೃತ್ತವಾಗಿದೆ . ಮಂಗಳೂರು ಕೆ.ಎಸ.ಆರ್.ಟಿ.ಸಿ ಬಸ್ಸ್ ಸ್ಟ್ಯಾಂಡ್ ಅಸುಪಾಸಿನಲ್ಲಿ ಹಾಗೂ ಜ್ಯೋತಿ ಸರ್ಕಲ್ ನ ಆಸುಪಾಸಿನಲ್ಲಿ ಅದೇ ರೀತಿ ಪುತ್ತೂರಿನ ಕೆ.ಎಸ.ಆರ್.ಟಿ.ಸಿ ಬಸ್ಸ್ ಸ್ಟ್ಯಾಂಡ್ , ಬೆಳ್ತಗಂಡಿ ಕೆ.ಎಸ.ಆರ್.ಟಿ.ಸಿ ಬಸ್ಸ್ ಸ್ಟ್ಯಾಂಡ್ ಹತ್ತಿರವೂ ಸಹ ಸಮಿತಿಯ ಕಾರ್ಯಕರ್ತರು ಕೈಯಲ್ಲಿ ಪ್ರಬೋಧನಾ ಫಲಕವನ್ನು ಹಿಡಿದು ನಿಂತಿದ್ದರು. ಈ ಮೂಲಕ ನಾಗರಿಕರಿಗೆ ‘ಕರೋನಾ 19’ ರೋಗಾಣು ವಿರುದ್ಧ ಹೋರಾಡಲು ಸರಕಾರ ಹಾಗೂ ಅದಕ್ಕೆ ಸಂಬಂಧಪಟ್ಟ ಖಾತೆಯು ಹೇಳಿದ ಎಲ್ಲ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು, ಅದೇ ರೀತಿ ಸಂಘಟಿತವಾಗಿ ಈ ಮಹಾಮಾರಿಯನ್ನು ತಡೆಗಟ್ಟಲು ಪ್ರಯತ್ನಿಸುತ್ತಿರಬೇಕು ಎಂದು ಕರೆ ನೀಡಲಾಯಿತು.
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…
ಬಹುನಿರೀಕ್ಷಿತ ಆಕ್ಸಿಯಮ್ ಮಿಷನ್-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…
ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…
ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ…
ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ…