ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೋವಿಡ್-19 (ಕೊರೋನಾ 19 ರೋಗಾಣು) ವಿರುದ್ಧ ಹೋರಾಡಲು ಮಾರ್ಚ್ 22 ರಂದು ಬೆಳಗ್ಗೆ 7 ರಿಂದ ರಾತ್ರಿ 9 ರ ತನಕ ‘ಜನತಾ ಕರ್ಫ್ಯೂ’ಗೆ ಕರೆ ನೀಡಿದ್ದಾರೆ. ಪ್ರಧಾನಮಂತ್ರಿಯವರ ಈ ಕರೆಗೆ ಬೆಂಬಲಿಸಿ ಇಡೀ ಜಗತ್ತಿನಾದ್ಯಂತ ಇದೇ ಮೊದಲ ಬಾರಿ ಜನತೆಯು ರಾಷ್ಟ್ರಹಿತಕ್ಕಾಗಿ ತೆಗೆದುಕೊಂಡಿರುವ ಬಂದ್ ಆಗಿರಬಹುದು. ಹೀಗಾಗಿ ನಾಗರಿಕರೆಲ್ಲರು ಬೆಂಬಲಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಮನವಿ ಮಾಡಿದೆ.
ಕೊರೋನಾದಂತಹ ರಾಷ್ಟ್ರೀಯ ಆಪತ್ತಿನ ಸಮಯದಲ್ಲಿ ಜನಜಾಗೃತಿಯನ್ನು ಮಾಡಲು ಹಿಂದೂ ಜನಜಾಗೃತಿ ಸಮಿತಿ ಕಾರ್ಯಪ್ರವೃತ್ತವಾಗಿದೆ . ಮಂಗಳೂರು ಕೆ.ಎಸ.ಆರ್.ಟಿ.ಸಿ ಬಸ್ಸ್ ಸ್ಟ್ಯಾಂಡ್ ಅಸುಪಾಸಿನಲ್ಲಿ ಹಾಗೂ ಜ್ಯೋತಿ ಸರ್ಕಲ್ ನ ಆಸುಪಾಸಿನಲ್ಲಿ ಅದೇ ರೀತಿ ಪುತ್ತೂರಿನ ಕೆ.ಎಸ.ಆರ್.ಟಿ.ಸಿ ಬಸ್ಸ್ ಸ್ಟ್ಯಾಂಡ್ , ಬೆಳ್ತಗಂಡಿ ಕೆ.ಎಸ.ಆರ್.ಟಿ.ಸಿ ಬಸ್ಸ್ ಸ್ಟ್ಯಾಂಡ್ ಹತ್ತಿರವೂ ಸಹ ಸಮಿತಿಯ ಕಾರ್ಯಕರ್ತರು ಕೈಯಲ್ಲಿ ಪ್ರಬೋಧನಾ ಫಲಕವನ್ನು ಹಿಡಿದು ನಿಂತಿದ್ದರು. ಈ ಮೂಲಕ ನಾಗರಿಕರಿಗೆ ‘ಕರೋನಾ 19’ ರೋಗಾಣು ವಿರುದ್ಧ ಹೋರಾಡಲು ಸರಕಾರ ಹಾಗೂ ಅದಕ್ಕೆ ಸಂಬಂಧಪಟ್ಟ ಖಾತೆಯು ಹೇಳಿದ ಎಲ್ಲ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು, ಅದೇ ರೀತಿ ಸಂಘಟಿತವಾಗಿ ಈ ಮಹಾಮಾರಿಯನ್ನು ತಡೆಗಟ್ಟಲು ಪ್ರಯತ್ನಿಸುತ್ತಿರಬೇಕು ಎಂದು ಕರೆ ನೀಡಲಾಯಿತು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…