ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೋವಿಡ್-19 (ಕೊರೋನಾ 19 ರೋಗಾಣು) ವಿರುದ್ಧ ಹೋರಾಡಲು ಮಾರ್ಚ್ 22 ರಂದು ಬೆಳಗ್ಗೆ 7 ರಿಂದ ರಾತ್ರಿ 9 ರ ತನಕ ‘ಜನತಾ ಕರ್ಫ್ಯೂ’ಗೆ ಕರೆ ನೀಡಿದ್ದಾರೆ. ಪ್ರಧಾನಮಂತ್ರಿಯವರ ಈ ಕರೆಗೆ ಬೆಂಬಲಿಸಿ ಇಡೀ ಜಗತ್ತಿನಾದ್ಯಂತ ಇದೇ ಮೊದಲ ಬಾರಿ ಜನತೆಯು ರಾಷ್ಟ್ರಹಿತಕ್ಕಾಗಿ ತೆಗೆದುಕೊಂಡಿರುವ ಬಂದ್ ಆಗಿರಬಹುದು. ಹೀಗಾಗಿ ನಾಗರಿಕರೆಲ್ಲರು ಬೆಂಬಲಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಮನವಿ ಮಾಡಿದೆ.
ಕೊರೋನಾದಂತಹ ರಾಷ್ಟ್ರೀಯ ಆಪತ್ತಿನ ಸಮಯದಲ್ಲಿ ಜನಜಾಗೃತಿಯನ್ನು ಮಾಡಲು ಹಿಂದೂ ಜನಜಾಗೃತಿ ಸಮಿತಿ ಕಾರ್ಯಪ್ರವೃತ್ತವಾಗಿದೆ . ಮಂಗಳೂರು ಕೆ.ಎಸ.ಆರ್.ಟಿ.ಸಿ ಬಸ್ಸ್ ಸ್ಟ್ಯಾಂಡ್ ಅಸುಪಾಸಿನಲ್ಲಿ ಹಾಗೂ ಜ್ಯೋತಿ ಸರ್ಕಲ್ ನ ಆಸುಪಾಸಿನಲ್ಲಿ ಅದೇ ರೀತಿ ಪುತ್ತೂರಿನ ಕೆ.ಎಸ.ಆರ್.ಟಿ.ಸಿ ಬಸ್ಸ್ ಸ್ಟ್ಯಾಂಡ್ , ಬೆಳ್ತಗಂಡಿ ಕೆ.ಎಸ.ಆರ್.ಟಿ.ಸಿ ಬಸ್ಸ್ ಸ್ಟ್ಯಾಂಡ್ ಹತ್ತಿರವೂ ಸಹ ಸಮಿತಿಯ ಕಾರ್ಯಕರ್ತರು ಕೈಯಲ್ಲಿ ಪ್ರಬೋಧನಾ ಫಲಕವನ್ನು ಹಿಡಿದು ನಿಂತಿದ್ದರು. ಈ ಮೂಲಕ ನಾಗರಿಕರಿಗೆ ‘ಕರೋನಾ 19’ ರೋಗಾಣು ವಿರುದ್ಧ ಹೋರಾಡಲು ಸರಕಾರ ಹಾಗೂ ಅದಕ್ಕೆ ಸಂಬಂಧಪಟ್ಟ ಖಾತೆಯು ಹೇಳಿದ ಎಲ್ಲ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು, ಅದೇ ರೀತಿ ಸಂಘಟಿತವಾಗಿ ಈ ಮಹಾಮಾರಿಯನ್ನು ತಡೆಗಟ್ಟಲು ಪ್ರಯತ್ನಿಸುತ್ತಿರಬೇಕು ಎಂದು ಕರೆ ನೀಡಲಾಯಿತು.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…