Advertisement
ಸುದ್ದಿಗಳು

ಕೊರೊನಾ ವೈರಸ್ ಭೀತಿ | ಮಾ.31 ರವರೆಗೆ ದಕ್ಷಿಣ ಕನ್ನಡ ಜಿಲ್ಲೆ ಬಂದ್ | ಆತಂಕ-ಭಯ ಬೇಡ- ಇರಲಿ ಎಚ್ಚರ | ಕಾಸರಗೋಡು ಗಡಿಭಾಗದಲ್ಲಿ ಬೇಕಿದೆ ಕಟ್ಟೆಚ್ಚರ | ದೇಶದ 75 ಜಿಲ್ಲೆಗಳು ಮಾ.31 ರವರೆಗೆ ಬಂದ್ |

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಇದುವರೆಗೆ ಕೊರೊನಾ ವೈರಸ್ ಸೋಂಕು ಇರುವುದು  ದೃಢಪಟ್ಟಿಲ್ಲ. ಆದರೆ ಕಾಸರಗೋಡು ಗಡಿಭಾಗವಾದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮಾ.31 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಲಾಕ್ ಡೌನ್ ಮಾಡಲಾಗುತ್ತಿದೆ.  ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಆತಂಕ-ಭಯ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಅಗತ್ಯ ಸೇವೆಗಳು ಲಭ್ಯವಿದೆ. ಕೊರೊನಾ ವೈರಸ್ ಹರಡುವುದನ್ನು  ತಡೆಯಲು ಸೂಕ್ತ ಮುನ್ನೆಚ್ಚರಿಕಾ ಕ್ರಮ ಅಗತ್ಯವಾಗಿದೆ.

Advertisement
Advertisement
Advertisement
Advertisement

ಕಾಸರಗೋಡು ಜಿಲ್ಲೆಯು ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡು ಇರುವುದರಿಂದ ಸಾಕಷ್ಟು ಮುನ್ನೆಚ್ಚರಿಕಾ ಕ್ರಮ ಅಗತ್ಯವಾಗಿದೆ. ಈಗಾಗಲೇ ಕಾಸರಗೋಡು ಪ್ರದೇಶದಲ್ಲಿಯೇ ಒಟ್ಟು 12 ಕೊರೊನಾ ವೈರಸ್ ಸೋಂಕು ಇರುವ ಪ್ರಕರಣ ದೃಢಪಟ್ಟಿದೆ. ಸೋಂಕು ಇರುವ ವ್ಯಕ್ತಿಗಳು ಈ ಹಿಂದೆ ಸಾಕಷ್ಟು ಕಡೆ ಓಡಾಡಿದ ಹಿನ್ನೆಲೆಯಲ್ಲಿ  ಮುನ್ನೆಚ್ಚರಿಕಾ ಕ್ರಮ ಅಗತ್ಯವಾಗಿದೆ. ವಿಶೇಷವಾಗಿ ಕಾಸರಗೋಡು-ದಕ ಜಿಲ್ಲೆ ಗಡಿಭಾಗದಲ್ಲಿನ ಜನರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ.

Advertisement

ಮಾ.31 ರವರೆಗೆ ದ ಕ ಜಿಲ್ಲೆಯೂ ಲಾಕ್ ಡೌನ್ ಎಂಬ ಆತಂಕ ಹಾಗೂ ಭಯ ಅನಗತ್ಯ. ಅಗತ್ಯ ಸೇವೆಗಳು ಲಭ್ಯವಿದ್ದು ಗುಂಪಾಗಿ ಸೇರುವುದು  ಹಾಗು ಅನಗತ್ಯವಾಗಿ ನಗರ ಪ್ರದೇಶಗಳಿಗೆ ಹೋಗುವುದು ತಡೆಯುವುದೇ ಇದರ ಮುಖ್ಯ ಉದ್ದೇಶವಾಗಿದೆ. ವಾರಗಳ ಕಾಲ ಜನರು ಈ ಹೋರಾಟದಲ್ಲಿ ಸಹಕರಿಸಿದರೆ ಹಾಗೂ ವಿದೇಶದಿಮದ ಬರುವ ವ್ಯಕ್ತಿಗಳಿಗೆ ತಿಳಿಹೇಳಿ, ಮನೆಯವರೂ ಮುಂಜಾಗ್ರತೆ ವಹಿಸಿದರೆ ಮುಂದಿನ 15 ದಿನಗಳಲ್ಲಿ  ಯಥಾ ಸ್ಥಿತಿ ಬರಬಹುದಾಗಿದೆ. ಹೀಗಾಗಿ ಪ್ರತಿಯೊಬ್ಬ ನಾಗರಿಕನೂ ಜಾಗೃತವಾಗುವುದೇ ಕೊರೊನಾ ವೈರಸ್ ತಡೆಗೆ ಇರುವ ಪರಿಹಾರವಾಗಿದೆ.

ಈ ನಡುವೆ ದೇಶದಲ್ಲಿ ಕೊರೊನಾ ವೈರಸ್ ಪತ್ತೆಯಾದ 75 ಜಿಲ್ಲೆಗಳು ಬಂದ್ ಆಗಲಿದೆ. ಅಗತ್ಯ ಸೇವೆಗಳು ಮಾತ್ರವೇ ಲಭ್ಯವಿದ್ದು ಇತರ ಯಾವುದೇ ಸೇವೆಗಳು ಮಾ.31 ರವರೆಗೆ ಲಭ್ಯವಾಗುವುದಿಲ್ಲ. 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

9 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

9 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

9 hours ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

17 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

18 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

19 hours ago